Tuesday, June 3, 2025

Latest Posts

ಬೆಳಗಾವಿಯಲ್ಲಿ ಶೆಟ್ಟರ್ ಪರ ಮಾಜಿ ಸಿಎಂ ಯಡಿಯೂರಪ್ಪ ಭರ್ಜರಿ ಕ್ಯಾಂಪೇನ್

- Advertisement -

Political News: ಟಿಕೇಟ್ ಸಿಗಲಿಲ್ಲವೆಂಬ ಸಿಟ್ಟಿನಿಂದ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಪುನಃ ಬಿಜೆಪಿಗೆ ಮರಳಿ ಕರೆತಂದಿದ್ದು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ ಅವರಿಗೆ ಟಿಕೇಟ್ ಸಿಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತೀ ಬಾರಿಯಂತೆ ಧಾರವಾಡ ಲೋಕಸಭಾ ಟಿಕೇಟ್ ಪ್ರಹ್ಲಾದ್ ಜೋಶಿ ಪಾಲಾಗಿದೆ.

ಇನ್ನು ಶೆಟ್ಟರ್‌ಗೆ ಟಿಕೇಟ್ ಘೋಷಣೆಯಾಗಿದ್ದ ದಿನವೇ ಮಾಜಿ ಸಿಎಂ ಯಡಿಯೂರಪ್ಪ, ಶೆಟ್ಟರ್‌ಗೆ ಕಾಲ್ ಮಾಡಿ, ಅಭಿನಂದನೆ ತಿಳಿಸಿ, ನಾನು ಬುದ್ಧವಾರದ ದಿನ ಬೆಳಗಾವಿಗೆ ಬಂದು ನಿಮ್ಮೊಂದಿಗೆ ಕ್ಯಾಂಪೇನ್ ಮಾಡುತ್ತೇನೆ ಎಂದಿದ್ದರು. ಕೊಟ್ಟ ಮಾತಿನಂತೆ, ಶೆಟ್ಟರ್ ಮತ್ತು ಯಡಿಯೂರಪ್ಪ ಇಂದು ಬೆಳಗಾವಿಗೆ ಗ್ರ್ಯಾಂಡ್ ಎಂಟ್ರಿಕೊಟ್ಟು, ಕ್ಯಾಂಪೇನ್ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಂಘಟನೆ ಮತ್ತು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸುವ ಉದ್ದೇಶದಿಂದ, ಪಕ್ಷದ ಅಭ್ಯರ್ಥಿ ಶ್ರೀ ಜಗದೀಶ ಶೆಟ್ಟರ್ ಅವರೊಂದಿಗೆ ಇಂದು ಬೆಳಗಾವಿಗೆ ಭೇಟಿ ನೀಡಲಾಯಿತು. ಅತ್ಯಂತ ಪ್ರೀತಿ ಉತ್ಸಾಹಗಳಿಂದ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ನಮ್ಮ ಕಾರ್ಯಕರ್ತರೊಂದಿಗೆ ಬೈಕ್ ರ್‍ಯಾಲಿ ನಡೆಸಲಾಯಿತು. ಈ ಬಾರಿಯೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವಿನ ಧ್ವಜ ಹಾರಾಡಲಿದೆ. ರಾಜ್ಯದ ಎಲ್ಲ ಕಡೆಯಲ್ಲಿಯೂ ಇದೇ ರೀತಿಯ ವಾತಾವರಣವಿದ್ದು, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ಸುನಿಶ್ಚಿತವಾಗಿದೆ.

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ

ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್‌ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ

- Advertisement -

Latest Posts

Don't Miss