Yadagiri News: ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಒಂದು ದಶಕಗಳ ಬಳಿಕ ಬಸವಸಾಗರ ಜಲಾಶಯದ ಡೆಡ್ ಸ್ಟೋರೆಜ್ ಉಂಟಾಗಿದ್ದು, ಜನರು ಹಾಗೂ ರೈತರಿಗೆ ಬದುಕಲು ಸಂಕಷ್ಟವಾಗಿದೆ. ಯಾದಗಿರಿ ಜಿಲ್ಲೆಯ ರೈತರಿಗೆ ಕುಡಿಯಲು ನೀರಿಲ್ಲ, ಬೆಳೆಗೂ ನೀರಿಲ್ಲ. ಇದರಿಂದ ಬೆಳೆಗಳಾದ ಹೆಸರು, ಹತ್ತಿ, ಭತ್ತ ಹಾಗೂ ಉದ್ದು ಬೆಳೆ ಹಾನಿಯಾಗಿದೆ. ಸರ್ಕಾರ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು. ಜೊತೆಗೆ ಸರ್ಕಾರ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ, ಕೊಯ್ನಾ ಡ್ಯಾಮ್ ನಿಂದ ಕುಡಿಯಲಿ ನೀರು ಬಿಡುಗಡೆ ಮಾಡಲು ಮಾತುಕತೆ ನಡೆಸಬೆಕೇಂದು ತಿಳಿಸಿದರು.
ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಪೈಟ್: ಟಿಕೆಟ್ ತಪ್ಪಿದವರ ಸರ್ಕಸ್
ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ
ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ: ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು