Facebook Instagram Twitter Youtube
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
Search
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Karnataka TVKarnataka Tv
Sign in / Join
Tuesday, December 23, 2025
Sign in / Join
Facebook
Instagram
Twitter
Youtube
Karnataka TVKarnataka Tv
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
type here...
  • Best MLA
    • old ಮೈಸೂರು
Home ರಾಜ್ಯ ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದ್ರೆ ಜೈಲು ಫಿಕ್ಸ್!
  • ರಾಜ್ಯ

ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದ್ರೆ ಜೈಲು ಫಿಕ್ಸ್!

December 12, 2025
WhatsApp
Twitter
Facebook
Linkedin
Telegram

    ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಪಡಿಸುವ ಅವಕಾಶ ಇದೆ.

    ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ-2025ನ್ನು ವಿಧಾನಸಭೆಯಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಮಂಡನೆ ಮಾಡಿದರು. ಇದರ ಪ್ರಕಾರ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂಥವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಪಡಿಸುವ ಅವಕಾಶ ಇದೆ.

    ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದು.

    ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶಿಸಬಹುದು. ಪೀಡಿತರಿಗೆ ಸಹಾಯ ಒದಗಿಸಲು ಸೂಚಿಸಬಹುದು. ದಂಡದ ಮೊತ್ತವನ್ನು ಪೀಡಿತರಿಗೆ ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಡಿಸಿಗಳಿಗೂ ಕೆಲ ಅಧಿಕಾರ ಕೊಡಲಾಗಿದೆ. ಇನ್ನು ಸಾಮಾಜಿಕ ಬಹಿಷ್ಕಾರ ತಡೆಗೆ ಅಧಿಕಾರಿಗಳನ್ನು ನಿಯೋಜಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ.

    ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು, ಮಾನವ ಹಕ್ಕುಗಳನ್ನು ನಿರಾಕರಿಸುವುದು, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ಮಸೂದೆಯಡಿ ನಿಷೇಧಿಸಲಾಗಿದೆ.

    About The Author

    Karnataka Tv

    See author's posts

    • TAGS
    • 1 lakh fine Karnataka law
    • 3 years jail social boycott
    • govt rules
    • HC Mahadevappa bill
    • kannada news
    • Karnataka assembly bill 2025
    • karnataka news
    • Karnataka social boycott law
    • social boycott punishment
    • socially boycott
    Share
    WhatsApp
    Twitter
    Facebook
    Linkedin
    Telegram
      Previous articleಸಿನಿಮಾಗೆ ಪೇಮೆಂಟ್ ಕೊಟ್ಟಿಲ್ಲ, ಶೋಕಿಗೆ ಕೆಲ್ಸ ಮಾಡ್ಬೇಡಿ: Raghu Ramappa Podcast
      Next articleMandya: ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದಾನೆ ಈ ಪ್ರಸಿದ್ಧ ಸಿನಿಮಾದ ನಟ
      Karnataka Tv

      RELATED ARTICLESMORE FROM AUTHOR

      ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

      ಫ್ಯಾಟ್‌ ಪೊಲೀಸ್‌ ಅಲ್ಲ : ಇನ್ಮೇಲೆ ಫಿಟ್‌ ಪೊಲೀಸ್‌!

      Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

      Stay connected

      Facebook
      Instagram
      Twitter
      Youtube

      © 2025 Karnataka TV - All Rights Reserved | Powered by Kalahamsa Infotech Pvt. ltd.