www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ..
ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನ ಸಲ್ಲಿಸಬಹುದಾಗಿದೆ. ಸಭೆಯಲ್ಲಿ ಸಾರ್ವಜನಿಕರಿಗೆ ವಿವಿಧ ಇಲಾಖೆಗಳಿಂದ ಲಭ್ಯವಿರುವ ಸವಲತ್ತು ಮತ್ತು ಯೋಜನೆಗಳ ಮಾಹಿತಿ ನೀಡಲಾಗುವುದರ ಜೊತೆಗೆ ಸಕಾಲ, ಭೂಮಿ ಇನ್ನಿತರ ಇಲಾಖೆಗಳಲ್ಲಿ ಅನುಷ್ಠಾನಕ್ಕೆ ಬಂದಿರುವ ಯೋಜನೆಗಳ ಮಾಹಿತಿ ನೀಡುವ ಜೊತೆಗೆ ಅರಿವು ಮೂಡಿಸಲಾಗುವುದು. ಸಾರ್ವಜನಿಕರ ಅಹವಾಲುಗಳನ್ನ ಸ್ವೀಕರಿಸಿಲಾಗುತ್ತದೆ ಮತ್ತು ಅವಧಿಯೊಳಗೆ ನಿಯಮಾನುಸಾರ ವಿಲೇವಾರಿ ಮಾಡುವ ಮೂಲಕ ಅರ್ಜಿದಾರರ ಸಮಸ್ಯೆಗೆ ತ್ವರಿತ ಪರಿಹಾರ ಕಂಡುಕೊಳ್ಳಲು ಅನುವು ಮಾಡಿಕೊಡಲಾಗುತ್ತದೆ..
ಪ್ರಸಾದ್ ಯಡಹುಂಡಿ ಕರ್ನಾಟಕ ಟಿವಿ ಗುಂಡ್ಲುಪೇಟೆ