Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ಕೌಂಟರ್ ಪ್ರಕರಣವನ್ನು ಸಿಐಡಿಗೆ ನೀಡಿರುವ ಬೆನ್ನಲ್ಲೇ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನೂ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬಾಲಕಿ ಹತ್ಯೆ ನಂತರದಲ್ಲಿ ನಡೆದ ಎನ್ ಕೌಂಟರ್ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈಗ ಬಾಲಕಿಯ ಹತ್ಯೆಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಅನ್ವಯ ಸಿಐಡಿ ತಂಡ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದು, ಏತ್ಮನಧ್ಯೆ, ಇದೀಗ ಬಾಲಕಿ ಹತ್ಯೆ ಪ್ರಕರಣವನ್ನು ಸರಕಾರ ಸಿಐಡಿಗೆ ಹಸ್ತಾಂತರಿಸುವ ಮೂಲಕ ಬಿಗ್ ಟ್ವಿಸ್ಟ್ ನೀಡಿದೆ. ಹೌದು.. ಹುಬ್ಬಳ್ಳಿಯ ಹೊರವಲಯದ ರಾಯನಾಳ ರಸ್ತೆ ಬ್ರಿಡ್ಜ್ ಬಳಿ ನಡೆದಿದ್ದ ಎನ್ ಕೌಂಟರ್ ಪ್ರಕರಣ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಈ ಪ್ರಕರಣದ ತನಿಖೆಗೆ ಎಸಿಪಿ ಯಶವಂತ ಒಡೆಯರ್ ಅವರನ್ನು ನೇಮಿಸಲಾಗಿತ್ತು. ಇದೇ ವೇಳೆ ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಅನ್ವಯ ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ ತಂಡ ಏ.15ರಂದು ಪ್ರಕರಣವನ್ನು ಹಸ್ತಾಂತರಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಅದರಂತೆ ಇಲ್ಲಿಯ ವಿಜಯನಗರದಲ್ಲಿ ಏ.13ರಂದು ನಡೆದ ಬಾಲಕಿ ಹತ್ಯೆಗೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಅದೇ ಠಾಣೆಯ ಪಿಐ ಕಿರಣಕುಮಾರ ತಾವರಗೆರೆ ತನಿಖೆ ನಡೆಸುತ್ತಿದ್ದರು. ಇದೀಗ ಈ ಪ್ರಕರಣವನ್ನೂ ಸಹ ಸರಕಾರ ಸಿಐಡಿಗೆ ಹಸ್ತಾಂತರಿಸಿದೆ.
ಇನ್ನೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಪಿಐ ಲಕ್ಕಪ್ಪ ಅಗ್ನಿ ಹಾಗೂ ತಂಡದಿಂದ ತನಿಖೆ ನಡೆಸಲಾಗುತ್ತಿದೆ. ಬಿಹಾರ ಮೂಲದ ರಿತೇಶಕುಮಾರ(35) ಎನ್ಕೌಂಟರ್ ಪ್ರಕರಣ ಸುಪ್ರಿಂ ಕೋರ್ಟ್ ಗೈಡ್ಲೈನ್ಸ್ ಅನ್ವಯ ಸಿಐಡಿ ತಂಡ ವಹಿಸಿಕೊಂಡಿತ್ತು. ಆದರೀಗ ಸರಕಾರವೇ ಬಾಲಕಿ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.