ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಪಾಕಿಗಳ ರುಂಡ ಚಂಡಾಡುವ ಕೆಲಸ ಮಾಡಿದೆ. ಅಲ್ಲದೆ ರಫೇಲ್, ಬ್ರಹ್ಮೋಸ್ ಹಾಗೂ ಸುಖೋಯ್ ಯುದ್ಧ ವಿಮಾನಗಳು, ಕ್ಷಿಪಣಿಗಳ ಸಹಾಯದಿಂದ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ನಡೆಸಿ ಸಂಪೂರ್ಣ ಉಡೀಸ್ ಮಾಡುವ ಮೂಲಕ ಪಹಲ್ಗಾಮ್ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ಒದಗಿಸುವ ಕೆಲಸವನ್ನು ಭಾರತೀಯ ಸೇನೆಯು ಮಾಡಿದೆ.
ಪಾಕ್ಗೆ ಜಾಗತಿಕ ಮಟ್ಟದಲ್ಲಿ ಮುಖಭಂಗ..
ಇನ್ನೂ ಭಾರತೀಯ ಸೇನೆಯು ಯಶಸ್ವಿಯಾಗಿ ನಡೆಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲೂ ಭಾರಿ ಸದ್ದು ಮಾಡುತ್ತಿದೆ. ಭಾರತದ ದಿಟ್ಟತನ ಹಾಗೂ ಭಯೋತ್ಪಾದನೆಯ ವಿರುದ್ಧ ಹೋರಾಟದ ಸಂಕಲ್ಪವನ್ನು ವಿಶ್ವದ ಗಣ್ಯರು ಶ್ಲಾಘಿಸಿದ್ದಾರೆ. ಅಲ್ಲದೆ ಜಗತ್ತಿಗೆ ಕಂಟಕಪ್ರಾಯವಾಗಿರುವ ಭಯೋತ್ಪಾದನೆಯ ಫ್ಯಾಕ್ಟರಿಯಾಗಿರುವ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದ್ದಾರೆ. ಇನ್ನೂ ಭಯೋತ್ಪಾದಕರ ದಾಳಿಯಿಂದ ಭಾರತ ತನ್ನ ರಕ್ಷಣೆಯ ಹಕ್ಕನ್ನು ನಾವು ಬೆಂಬಲಿಸುತ್ತೇವೆ. ಉಗ್ರರು ಅಮಾಯಕರ ವಿರುದ್ಧ ನಡೆಸಿದ ಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಅವರ ಅರಿವಿಗೆ ಬರಬೇಕು ಎಂದು ಭಾರತವನ್ನು ಬೆಂಬಲಿಸಿರುವ ಇಸ್ರೇಲ್ ಪಾಕಿಸ್ತಾನದ ಕೊಳಕು ಕೆಲಸವನ್ನು ಖಂಡಿಸಿದೆ. ಈ ಮೂಲಕ ಪಾಕ್ ಜಾಗತಿಕ ಮಟ್ಟದಲ್ಲಿ ಮುಖಭಂಗಕ್ಕೊಳಗಾಗಿದೆ.
ಭಾರತ ತನ್ನ ರಕ್ಷಣೆಯ ಹಕ್ಕನ್ನು ಸಾಧಿಸಿದೆ..
ಅಲ್ಲದೆ ಭಯೋತ್ಪಾದನೆಯ ಪಿಡುಗಿನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಭಾರತದ ಕ್ರಮವನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಮಸ್ಯೆ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಮತ್ತು ನಾಗರಿಕರನ್ನು ರಕ್ಷಿಸಲು ಸಂಯಮದಿಂದ ವರ್ತಿಸುವಂತೆ ಕರೆ ನೀಡುತ್ತೇವೆ ಎಂದು ಫ್ರಾನ್ಸ್ ವಿದೇಶಾಂಗ ಸಚಿವ ಜೀನ್-ನೋಯೆಲ್ ಬ್ಯಾರಟ್ ಮನವಿ ಮಾಡಿದ್ದಾರೆ. ಭಾರತ – ಪಾಕ್ ನಡುವಿನ ಉದ್ವಿಗ್ನತೆ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಾಕಿಸ್ತಾನ ಮಾಡಿದ್ದು ಇದು ನಾಚಿಕೆಗೇಡಿನ ಸಂಗತಿ, ಈ ವಿವಾದ ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಈ ವೇಳೆ, ಹಿಂದಿನ ಕೆಲವು ಘಟನೆಗಳ ಆಧಾರದ ಮೇಲೆ ಏನಾದರೂ ಸಂಭವಿಸಲಿದೆ ಎಂದು ತಿಳಿದಿತ್ತು. ಈ ಎರಡೂ ದೇಶಗಳು ಬಹಳ ಸಮಯದಿಂದ ಹೋರಾಡುತ್ತಿವೆ. ಇದು ಬಹಳ ಬೇಗ ಕೊನೆಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್ ಶ್ವೇತಭವನದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳ್ಳನಿಗೊಬ್ಬ ಸುಳ್ಳನ ಸಪೋರ್ಟ್…!
ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಮೆರಿಕ ಪರಮಾಣು ಶಸ್ತ್ರಗಳನ್ನು ಹೊಂದಿರುವ ಏಷ್ಯಾದ ನೆರೆಹೊರೆಯ ದೇಶಗಳೊಂದಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಮುಂದುವರೆಸುತ್ತದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪ್ರತಿಕ್ರಿಯಿಸಿದ್ದಾರೆ. ಆದರೆ ಕಳ್ಳನಿಗೊಬ್ಬ ಸುಳ್ಳನ ಸಪೋರ್ಟ್ ಎನ್ನುವಂತೆ ಪಾಕಿಸ್ತಾನದ ಮೇಲಿನ ಭಾರತದ ದಾಳಿಯ ಬಗ್ಗೆ ಚೀನಾಗೆ ತೊಂದರೆಯಾಗಿದೆ, ನಮಗೆ ಆತಂಕವಾಗಿದೆ ಎಂದು ಚೀನಾ ಹೇಳಿದೆ. ಎರಡೂ ದೇಶಗಳೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಅಲ್ಲದೇ ದಾಳಿಗಳು ಮುಂದುವರೆಯದಂತೆ ಉಭಯ ದೇಶಗಳು ಶಾಂತಿಯಿಂದ ಇರುವಂತೆ ಬುರುಡೆ ಬಿಟ್ಟಿದೆ.
ಭಾರತ ವಿರೋಧಿ ಇಂಗ್ಲೆಂಡ್ ಡಬಲ್ ಸ್ಟ್ಯಾಂಡ್..
ನೆರೆಹೊರೆಯವರ ನಡುವಿನ ಅತ್ಯಂತ ಕೆಟ್ಟ ಹಿಂಸಾಚಾರವಾಗಿದೆ. ಮತ್ತಷ್ಟು ಉದ್ವಿಗ್ನತೆ ನಡೆಯದಂತೆ ಸಂಯಮವನ್ನು ಕಾಯ್ದುಕೊಳ್ಳಬೇಕು ಎಂದು ಉದ್ವಿಗ್ನತೆ ವಿಚಾರವಾಗಿ ರಷ್ಯಾ ಮನವಿ ಮಾಡಿದೆ. ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಮತ್ತು ಪಾಕಿಸ್ತಾನ ಎರಡನ್ನೂ ಬೆಂಬಲಿಸಲು ನಾವು ಸಿದ್ಧವಾಗಿದ್ದೇವೆ ಎಂದು ಉದ್ವಿಗ್ನತೆ ವಿಚಾರವಾಗಿ ಪ್ರತಿಕ್ರಿಯಿಸಿರುವ ರಷ್ಯಾ, ತಿಳಿಸಿದೆ. ನಾವು ಎರಡೂ ದೇಶಗಳಿಗೆ ಸ್ನೇಹಿತರಾಗಿದ್ದೇವೆ. ನಾವು ಎರಡೂ ದೇಶಗಳನ್ನು ಬೆಂಬಲಿಸಲು ಸಿದ್ಧರಿದ್ದೇವೆ. ಶಾಂತಿ ಸ್ಥಾಪನೆಗೆ ಎರಡೂ ದೇಶಗಳನ್ನು ಬೆಂಬಲಿಸುತ್ತೇವೆ ಎಂದು ಇಂಗ್ಲೆಂಡ್ ತನ್ನ ಭಾರತ ವಿರೋಧಿ ನಿಲುವನ್ನು ತೋರಿಸಿದೆ. ಇನ್ನೂ ಮುಖ್ಯವಾಗಿ ಈ ದೇಶಗಳಷ್ಟೇ ಅಲ್ಲದೆ ವಿಶ್ವದ ಇನ್ನೂ ಹಲವು ದೇಶಗಳು ಭಾರತಕ್ಕೆ ತಮ್ಮ ಬೆಂಬಲವನ್ನು ನೀಡುತ್ತಿವೆ. ಆಪರೇಷನ್ ಕಾರ್ಯಾಚರಣೆಯನ್ನು ಕೈಗೊಂಡಿರುವ ಭಾರತವು ಉಗ್ರರನ್ನು ಸದೆ ಬಡಿಯಲು ಮುಂದಾಗಿರುವುದು ಜಾಗತಿಕ ಮಟ್ಟದಲ್ಲಿ ಭಾರತದ ಬಗ್ಗೆ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಮೂಲಕ ಜಗತ್ತಿನೆದುರು ಭಾರತ ಸೂಪರ್ ಪವರ್ ರಾಷ್ಟ್ರವಾಗುವತ್ತ ಹೆಜ್ಜೆ ಹಾಕಿದೆ.