Sunday, September 8, 2024

Latest Posts

ಅಭಿಮಾನಿಗಳ ಬಳಿ ಚಿಕ್ಕದೊಂದು ಮನವಿ ಮಾಡಿದ ಗೋಲ್ಡನ್ ಸ್ಟಾರ್..!

- Advertisement -

ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಲ್ಲಿ ಚಿಕ್ಕದೊಂದು ಮನವಿ ಮಾಡಿದ್ದಾರೆ.

ಇದೇ ಜುಲೈ2ರಂದು ಗಣೇಶ್ ಹುಟ್ಟುಹಬ್ಬವಿದ್ದು, ಈ ವರ್ಷದ ಹುಟ್ಟುಹಬ್ಬವನ್ನು ನೇರವಾಗಿ ನಿಮ್ಮೊಂದಿಗೆ ಸೇರಿ ಆಚರಿಸಲಾಗುತ್ತಿಲ್ಲ, ನಿಮ್ಮ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ.

ಈ ಬಗ್ಗೆ ಟ್ವೀಟರ್‌ನಲ್ಲಿ ದೊಡ್ಡ ಲೆಟರ್‌ನ್ನೇ ಹಾಕಿರುವ ಗಣೇಶ್, ನನ್ನೆಲ್ಲ ಅಭಿಮಾನಿಗಳೇ, ಬಂಧುಗಳೇ, ಸ್ನೇಹಿತರೇ, ಹಿತೈಷಿಗಳೇ, ಈ ಕೊರೊನಾ ಸಂಕಷ್ಟ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ತಾಲೂಕುಗಳಲ್ಲೂ, ನೀವು ನೊಂದವರ, ಹಸಿದವರ, ಅಸಹಾಯಕರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನ್ನೂ ಬಯಸದೇ, ಸದ್ದುಗದ್ದಲವಿಲ್ಲದೇ, ನಿಮ್ಮ ಮಾನವೀಯತೆಯನ್ನ ತೋರಿಸಿದಿರಿ. ಇದಕ್ಕಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗೆ ಹೆಮ್ಮೆ ಪಡುತ್ತೇನೆ.

https://youtu.be/RQ46o4h2TL4

ನಿಮಗೆ ಗೊತ್ತಿರುವ ಹಾಗೆ ಜುಲೈ 2ರಂದು ನನ್ನ ಹುಟ್ಟುಹಬ್ಬವಿದೆ. ಪ್ರತಿವರ್ಷ ಈ ದಿನ ಸಾವಿರಾರು ಮಂದಿ ಬೆಂಗಳೂರಿಗೆ ಬಂದು ನನ್ನ ಜನ್ಮದಿನವನ್ನ ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದೀರಿ. ಇದಕ್ಕೆ ನಾನು ಚಿರಋಣಿ.

ಆದರೆ ಈ ವರ್ಷ ಎಂದಿನಂತಿಲ್ಲ. ಕೊರೋನಾದಿಂದಾಗಿ ನಮ್ಮ ಬದುಕಿನ ಶೈಲಿಯೇ ಬದಲಾಗಿದೆ. ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಬಡಜನರು ದೈನಂದಿನ ದಿನವನ್ನೇ ನಡೆಸುವುದು ಕಷ್ಟಸಾಧ್ಯವಾಗಿದೆ. ನನ್ನ ನಾಡಿನ ಜನರು ಹೀಗೆ ಸಂಕಷ್ಟದಲ್ಲಿ ಇರುವಾಗ, ವೈಭವದ ಹುಟ್ಟುಹಬ್ಬದ ಆಚರಣೆ ಯಾವುದೇ ಕಾರಣಕ್ಕೂ ಬೇಡವೆಂದು ನಿರ್ಧರಿಸಿದ್ದೇನೆ.

ಹೊರ ಜಿಲ್ಲೆಗಳಿಂದ ನನ್ನ ಅಭಿಮಾನಿಗಳು ಈ ಸಮಯದಲ್ಲಿ ಬೆಂಗಳೂರಿಗೆ ಬರುವುದು ಬೇಡ. ನೀವು ನನಗಾಗಿ ಖರ್ಚು ಮಾಡುವ ಹಣವನ್ನು ಅದೇ ದಿನ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ. ಅದೇ ಅರ್ಥಪೂರ್ಣ ಆಚರಣೆಯಾಗುತ್ತದೆ.

ನನಗೆ ಶುಭಕೋರಲು ನನ್ನ ನಿವಾಸಕ್ಕೆ ಬರುವುದು ಬೇಡ. ನೀವೆಲ್ಲಿದ್ದೀರೋ ಅಲ್ಲಿಂದಲೇ ನನಗೆ ಶುಭಕೋರಿ ಆಶೀರ್ವದಿಸಿ ಎಂದು ಗಣೇಶ್ ಮನವಿ ಮಾಡಿದ್ದಾರೆ.

- Advertisement -

Latest Posts

Don't Miss