ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ.
ಹೌದು ವೀಕ್ಷಕರೇ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್ ಆಫರ್ ನೀಡಿದ್ದಾರೆ. ಅಂದಹಾಗೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆಯೊಂದಿಗೆ ಶುಬಾಶಯವನ್ನು ಸಲ್ಲಿಸಿದ್ರು. ಆದ್ರೆ ಇದೀಗ ಆಶ್ಚರ್ಯಾವೆಂಬಂತೆ ಗೃಹಲಕ್ಷ್ಮೀ ಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಬಹುದು ಎಂದು ತಿಳಿಸಿದ್ದಾರೆ.
ಅಷ್ಟಕ್ಕೂ ಈ ರೀಲ್ಸ್ ನ್ನು ಹೇಗೆ ಮಾಡಬೇಕು ಅನ್ನೋದನ್ನ ನೋಡೋದಾದ್ರೆ.. ಸದ್ಯ ಗೃಹಲಕ್ಷ್ಮೀ ಯೋಜನೆ, ಯಜಮಾನಿಯರಿಗೆ ತಮ್ಮ ಜೀವನದಲ್ಲಿ ಇಲ್ಲಿಯವರೆಗೆ ಯಾವೆಲ್ಲಾ ಬದಲಾವಣೆ ತಂದಿದೆ ಎಂದು ರೀಲ್ಸ್ ಮುಖಾಂತರ ಹೇಳಬೇಂಕಂತೆ. ನಂತರ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳಬೇಕು ಅಂತ ಸಚಿವೆ ಹೇಳಿದ್ದಾರೆ.
ಯಾವ ಯಜಮಾನಿಯರು ಮಾಡಿದ ರೀಲ್ಸ್ಗೆ ಹೆಚ್ಚು ವಿವರ್ಸ್ ಬರುತ್ತೋ, ಅಂತಹ ಮಹಿಳೆಯರಿಗೆ ಬಹುಮಾನ ಘೋಷಿಸಿದ್ದಾರೆ. ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕು, ನಂತರ ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರಂತೆ .
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘‘ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ ಮತ್ತು ಯುವ ಶಕ್ತಿ ಯೋಜನೆಗಳನ್ನು ಸರಿಯಾಗಿ ಹಂಚಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದ್ರು. ಹಾಗೇನೆ ಪಾಲಿಕೆ ವ್ಯಾಪ್ತಿಯ ಸಾರ್ವಜನಿಯರು, ಗ್ಯಾರಂಟಿ ಯೋಜನೆಗೆ ಸಂಬಂಧಪಟ್ಟಂತೆ ತಮ್ಮ ಸಮಸ್ಯೆ ಹಾಗೂ ದೂರಗಳನ್ನು 9480683972 ಗೆ ಕರೆ ಮಾಡಿ ಹೇಳಬಹುದು ಅಂದ್ರು.‘‘ಸಾರ್ವಜನಿಕರು ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಸೌಲಭ್ಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು, ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳು ಜನರಿಗೆ ಅಗತ್ಯ ಮಾಹಿತಿ ನೀಡಬೇಕು’’ ಎಂದು ಹೇಳಿದ್ರು.