ಬೆಂಗಳೂರು(ಫೆ.17): ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಯಿತು.
ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಮೂರು ನಾಲ್ಕು ಲಕ್ಷಗಳಿಗಿಂತ ಹೆಚ್ಚಿನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು ಮುಂಜಾಗ್ರತ ಕ್ರಮವಾಗಿ ನೀರು ಆರೋಗ್ಯ ಮುಂತಾದ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಪಟ್ಟಣ ಪಂಚಾಯಿತಿ ವತಿಯಿಂದ ಮಾಡಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಲೀಲಾವತಿ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ಹಚ್ ಅವರು ಮಾತನಾಡಿ, ಮೂರು ದಿನಗಳ ಕಾಲ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು ನಮ್ಮಲ್ಲಿ ನೀರಿನ ವ್ಯವಸ್ಥೆ ಇದೆ ಅದನ್ನು ವ್ಯವಸ್ಥಿತವಾಗಿ ರೈತರಿಂದ ಜಾತ್ರಾ ಮಹೋತ್ಸವಕ್ಕೆ ವ್ಯವಸ್ಥಿತವಾಗಿ ತಲುಪಿಸಲು ಬದ್ಧವಿದ್ದೇವೆ ಎಂದು ತಾವೇ ನೀರನ್ನ ಕುಡಿದು ಪರೀಕ್ಷಿಸಿದರು.