Sunday, September 8, 2024

Latest Posts

ನನಸಾಯ್ತು ಆ್ಯಕ್ಷನ್ ಕಿಂಗ್ ಕನಸು…!

- Advertisement -

www.karnatakatv.net: ಚೆನ್ನೈ- ನಟ ಅರ್ಜುನ್ ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಅಪಾರ ಭಕ್ತರು. ಸರ್ಜಾ ಕುಟುಂಬ ಮತ್ತೊಂದು ಮಹತ್ತರ ಕಾರ್ಯ ಮಾಡಿದೆ. ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನಿರ್ಮಿಸಿದ್ದಾರೆ. ಅವರ ಕನಸಿನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಚೆನ್ನೈನಲ್ಲಿ ಬೃಹತ್ ಆಂಜನೇಯ ವಿಗ್ರಹ ಸ್ಥಾಪಿಸಿದ್ದು, ದೇವಸ್ಥಾನದ ಕೆಲಸ ಸಂಪೂರ್ಣವಾಗಿದೆ. ಇದೀಗ ಉದ್ಘಾಟನೆಗೆ ಸಿದ್ಧವಾಗಿದ್ದು ಅದ್ಧೂರಿಯಾಗಿ ಕುಂಭಾಭಿಷೇಕ ನಡೆಯಲಿದೆ. ಈ ಬಗ್ಗೆ ನಟ ಅರ್ಜುನ್ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Latest Posts

Don't Miss