Friday, June 20, 2025

Latest Posts

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯ

- Advertisement -

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್ ನಲ್ಲಿರುವ ನಾಲ್ಕು ಜನ ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರವಾಸಕ್ಕೆಂದು ಕನಕಪುರದ ಸರ್ಕಾರಿ ಶಾಲೆಯ ಎಸ್‌ಎಸ್‌‌ಎಲ್‌ಸಿ ಮಕ್ಕಳು ಹಾಗೂ ಶಿಕ್ಷಕರು ಬಂದಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋವಿಡ್ ಭೀತಿಯಿಂದ ಜನರು ಚೀನಾ ತೊರೆಯುತ್ತಿದ್ದಾರೆ, ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ : ಶಾಂಘೈ ಆಸ್ಪತ್ರೆ ವ್ಯೆದ್ಯ ಡಾ. ಸಂಜೀವ್ ಚೌಬೆ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ

ಕೋವಿಡ್ ಭೀತಿಯಿಂದ ಜನರು ಚೀನಾ ತೊರೆಯುತ್ತಿದ್ದಾರೆ, ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ : ಶಾಂಘೈ ಆಸ್ಪತ್ರೆ ವ್ಯೆದ್ಯ ಡಾ. ಸಂಜೀವ್ ಚೌಬೆ

- Advertisement -

Latest Posts

Don't Miss