ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ ಮಳೆಯಾಗಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಮಾರ್ಚ್ (march) 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ಮತ್ತು 21 ರಂದು ಕರಾವಳಿ ಭಾಗದಲ್ಲಿ ಮಳೆ ಆಗಲಿದೆ. ಉತ್ತರ ಒಳನಾಡಿನ ಕೊಪ್ಪಳ (koppala), ರಾಯಚೂರು (Raichur), ಕಲಬುರಗಿ, ಯಾದಗಿರಿಯಲ್ಲಿ 20,21 ರಂದು ಸಾಧಾರಣ ಮಳೆ ಆಗಲಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಗಳಿವೆ.