www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿಕ್ಕಮಗಳೂರು ಗಳಲ್ಲಿ ಮೊಡ ಕವಿದ ವಾತಾವರಣ ವಿರಲಿದೆ. ಹಾಗೇ ರಾಜ್ಯ ರಾಜಧಾನಿತಯಲ್ಲು ಇಂದು ಮಳೆಯಾಗತ್ತದೆ ಎಂದು ಹವಾಮಾನ ವರದಿ ತಿಳಿಸಿದೆ.
ಈಬಾರಿ ಶೇ 27 ರಷ್ಟು ಹೆಚ್ಚಾಗಲಿದ್ದು, ಸೆ. 17 ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹೇಳಿದರು. ಕೆಲವು ದಿನಗಳು ಕೊಂಚ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.29ರ ವರೆಗೆ ಮಳೆಯಾಗುವುದು ಎಂದು ಹವಾಮಾನ ಇಲಾಖೆಯು ವರದಿಯನ್ನು ನೀಡಿದೆ.
ಕರ್ನಾಟಕ ಟಿವಿ – ಬೆಂಗಳೂರು