Thursday, June 19, 2025

Latest Posts

ರಾಜಣ್ಣಗೆ ಹೈಕಮಾಂಡ್ ಎಚ್ಚರಿಕೆ? ಸಿದ್ದು ಬಣದ ವಿರುದ್ಧ ಡಿಕೆಶಿ ಮೇಲುಗೈ

- Advertisement -

ಮೂರು ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಕೋಲಾಹಲ ಎಬ್ಬಿಸಿದ್ದ ಸಹಕಾರ ಸಚಿವ ರಾಜಣ್ಣ, ಒಂದೇ ವಾರಕ್ಕೆ ಸೈಲೆಂಟ್ ಆಗಿದ್ದಾರೆ. ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶವನ್ನು ಬಹಿರಂಗವಾಗಿ ಧಿಕ್ಕರಿಸಿದ್ದ ಸಹಕಾರ ರಾಜಣ್ಣ, ನಾಯಕತ್ವ ಬದಲಾವಣೆ ಸಂಬಂಧದ ಹೇಳಿಕೆ ಮೂಲಕ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ, ಸಿಎಂ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು. ನಾಯಕತ್ವ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಬೇಕು, ಈ ವಿಷಯಗಳಲ್ಲಿ ಯಾವುದೇ ಗೊಂದಲ ಇರಬಾರದು ಎಂದು ನಾನು ಭಾವಿಸುತ್ತೇನೆ. ಎಲ್ಲೆಲ್ಲಿ ಬದಲಾವಣೆ ಬೇಕಿದೆಯೋ ಅಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಕುರಿತು ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ರಾಜಣ್ಣ ಬಾಯಿಗೆ ಬೀಗ ಬಿದ್ದಿದೆ. ಈ ಕುರಿತು ಕಂಪ್ಲೀಟ್ ಮಾಹಿತಿ ಮೇಲಿನ ವಿಡಿಯೋದಲ್ಲಿದೆ.

- Advertisement -

Latest Posts

Don't Miss