ರಾಜ್ಯ ಸುದ್ದಿಗಳು:
ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ ವೇಗದಲ್ಲಿ ಚಲಿಸುವ ವಾಹನಗಳ ವಿರುದ್ದ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೈವೆಗಳಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು ವಾಹನ ನಂಬರ್ ಪ್ಲೇಟ್ಗಳನ್ನು ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಗಂಟೆಗೆ 100 ಕಿಲೋ ಮೀಟರ್ಗಿಂದ ಹೆಚ್ಚು ವೇಗವಾಗಿ ಸಂಚರಿಸುವ ವಾಹನಗಳ ವಿರುದ್ಧ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಟೋಲ್ ದರ ಹೆಚ್ಚಳ ಮಾಡಿರುವ ಪರಿಣಾಮ ಈ ಭಾಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಗಳ ಟಿಕೆಟ್ ದರ ಏರಿಕೆಯಾಗಿದೆ. ಜುಲೈ 1 ರಿಂದ ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿಯಲ್ಲಿ ಹೊಸ ಟೋಲ್ಗೇಟ್ ಆರಂಭಿಸಲಾಗಿದೆ. ಇಲ್ಲಿ ಪ್ರತಿ ಬಸ್ಗೆ 525 ರೂಪಾಯಿ ಸಂಗ್ರಹ ಮಾಡಲಾಗುತ್ತಿದೆ. ಟೋಲ್ ಸಂಗ್ರಹ ಸರಿದೂಗಿಸುವ ನಿಟ್ಟಿನಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ಹೇಳಿದೆ.ಜುಲೈ 4ರಿಂದ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.