ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Aaraga Gnanendra) ಅವರಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ರಘುಪತಿ ಭಟ್ ಯಾವ ಬೆದರಿಕೆಗೂ ನಾನು ಹೆದರುವುದಿಲ್ಲ, ಇಂತಹವು ಬೆದರಿಕೆಗಳನ್ನು ನಾನು ತುಂಬಾ ನೋಡಿದ್ದೇನೆ. ಉಡುಪಿ ಮತ್ತು ಬೆಂಗಳೂರಿನ ಮುಸಲ್ಮಾನರು ಬೆಂಬಲಕ್ಕಿದ್ದಾರೆ ಎಂದು ತಿಳಿಸಿದ್ದಾರೆ. ಉಡುಪಿಯ ಮುಸ್ಲಿಂ ಒಕ್ಕೂಟ, ಖಾಜಿಗಳು ನನಗೆ ಬೆಂಬಲ ನೀಡಿದ್ದಾರೆ. ನನಗೆ ದೇವರಿದ್ದಾರೆ, ಅವರೇ ನನ್ನ ಭದ್ರತೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಫೋನ್ ಮಾಡಿದ್ದಾರೆ. ಉಡುಪಿ ಕ್ಷೇತ್ರದ ಜನರೇ ನನಗೆ ಸೆಕ್ಯುರಿಟಿ ಗಾರ್ಡ್(Security Guard). ಯಾವುದೇ ಒಬ್ಬ ವ್ಯಕ್ತಿ ಒಂದು ಸಂಘಟನೆಯಿಂದ ಬೆದರಿಕೆ ಬಂದಿಲ್ಲ. ಹೈದರಾಬಾದ್ (Hyderabad)ನಿಂದ ಫೋನ್ ಕರೆ ಮಾಡಿ ಒಬ್ಬ ಹುಚ್ಚ ಮಾತನಾಡಿದ್ದಾನೆ. ಅವನಿಗೆ ಇಪ್ಪತ್ತು ನಿಮಿಷಗಳ ಕಾಲ ಉತ್ತರ ಕೊಟ್ಟಿದ್ದೇನೆ. ಈಗಷ್ಟೇ ಪೊಲೀಸ್ ವರಿಷ್ಠಾಧಿಕಾರಿ ಅವರು ಗನ್ ಮ್ಯಾನ್ ಕಳುಹಿಸಿದ್ದಾರೆ. ಅವರ ಮುಂಜಾಗ್ರಕತೆ ದೃಷ್ಟಿಯಿಂದ ಕಳುಹಿಸಿದ್ದಾರೆ. ಆದರೆ ನನಗೆ ಭದ್ರತೆಯ ಅವಶ್ಯಕತೆ ಇಲ್ಲ. ಭದ್ರತಾ ಸಿಬ್ಬಂದಿಯನ್ನು ನಿರಾಕರಿಸುವುದಿಲ್ಲ ಅಂತ ರಘುಪತಿ ಭಟ್ ತಿಳಿಸಿದ್ದಾರೆ.