ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ ಬಂದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಕಾಲೇಜಿಗೆ ಧಾವಿಸಿದ ರೇಣುಕಾಚಾರ್ಯಯ, ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ಜಗಳಗಳಿಗೆ ಮಕ್ಕಳ ಭವಿಷ್ಯ ಹಾಳುಮಾಡಬೇಡಿ ಅಂತ ಬುದ್ಧಿ ಹೇಳಿ ಎಲ್ಲರನ್ನು ಒಳಗೆ ಕಳುಹಿಸಿದ್ದಾರೆ.
ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ
ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು