Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೂಡಿ ವಿಜಯ್ ಕುಮಾರ್ ಬೆಂಬಲ ನೀಡುತ್ತಿರುವ ಹಿನ್ನೆಲೆ, ಮಾಲೂರು ನಗರದಾದ್ಯಂತ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.
ಮಾಲೂರಿನ ಸ್ವಾಭಿಮಾನಿ ಜನತಾ ಪಕ್ಷದಿಂದ ಬೃಹತ್ ಬೈಕ್ ರ್ಯಾಲಿ ಏರ್ಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ರ್ಯಾಲಿ ಶುರು ಮಾಡುವುದಕ್ಕೂ ಮುನ್ನ, ಹೂಡಿ ವಿಜಯ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಬಳಿಕ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಹೂಡಿ ವಿಜಯ್ ಚುನಾವಣಾ ಪ್ರಚಾರ ನಡೆಸಿದರು. ಇದೇ ವೇಳೆ ಮಾಲೂರು ಕ್ಷೇತ್ರದಲ್ಲಿ ಸರಿಯಾದ ರಸ್ತೆಗಳಿಲ್ಲ, ಯಾವುದೇ ಅಭಿವೃದ್ಧಿಯಾಗಿಲ್ಲವೆಂದು ಮಾಲೂರು ಶಾಸಕ ನಂಜೇಗೌಡ ವಿರುದ್ಧ ಹೂಡಿ ವಿಜಯ್ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಮಂದಿರ ಮತ್ತು ರಾಮಲಲ್ಲಾ ಇರುವ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ..
ಹೆಲ್ತ್ ಡ್ರಿಂಕ್ ಪಟ್ಟಿಯಿಂದ ಬೋರ್ನ್ವೀಟಾ ತೆಗೆದು ಹಾಕಲು ಕೇಂದ್ರ ಸರ್ಕಾರ ಆದೇಶ




