Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ತುಲಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ.
ತುಲಾ ರಾಶಿಯವರಿಗೆ ನರಗಳ ಸಮಸ್ಯೆ ಉಂಟಾಗುತ್ತದೆ. ಶತ್ರುಕಾಟ ಹೆಚ್ಚಾಗುತ್ತದೆ. ಅಲ್ಲದೇ, ಹಣದ ವಿಚಾರದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸಾಲ ಮಾಡುವ ಮುನ್ನ ಯೋಚಿಸಿ, ಸಾಲ ಮಾಡಿ. ಏಕೆಂದರೆ ಸದ್ಯ ಸಾಲದಿಂದ ಮುಕ್ತರಾಗಿರುತ್ತೀರಿ. ಅಥವಾಾ ಸಾಲ ಬಾಧೆಯಿಂದ ಬಳಲುತ್ತಿದ್ದೀರಿ. ಈ ಸಮಯದಲ್ಲಿ ಮತ್ತೆ ಸಾಲ ಮಾಡಿಕೊಂಡರೆ, ಕಷ್ಟ ಅನುಭವಿಸಬೇಕಾಗುತ್ತದೆ.
ವಾಹನ ಸಂಚಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಸ್ವಲ್ಪ ಗಮನಹರಿಸಿ. ಪರಿಹಾರಕ್ಕಾಗಿ ಸರ್ಪಕ್ಷೇತ್ರ ದರ್ಶನ ಮಾಡಿ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ವೀಡಿಯೋ ನೋಡಿ.