ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ
ಹುಬ್ಬಳ್ಳಿ – ಧಾರವಾಡ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದೆ. ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮುಸ್ಲಿಮರ ಗುಂಪು ಆಕ್ಷೇಪಿಸಿದ ನಂತರ ಉದ್ವಿಗ್ನತೆ ಉಂಟಾಗಿದೆ. ಅಭಿವೃದ್ಧಿ ಯೋಜನೆಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಎಂದು ಮೇಯರ್ ಈರೇಶ್ ಅಂಚಟಗೇರಿ ಹೇಳಿದ್ದಾರೆ.
ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ