www.karnatakatv.net : ಬೆಂಗಳೂರು : ನಿನ್ನೆ ನೂತನ ಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸಿ ಇಂದು ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕಾರವನ್ನು ಶುರುಮಾಡಿಕೊಂಡಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ನಾನು ಸಿಎಂ ಆಗಿ ನನ್ನ ಕೆಲಸವನ್ನು ಮಾಡುತ್ತಿದ್ದೆನೇ.
ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ.. ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದವನು. ಹುಬ್ಬಳ್ಳಿ ಧಾರವಾಡ ಅಭಿವೃದ್ದಿಗೆ ಅಗತ್ಯ ಪ್ರಾಶಸ್ತ್ಯ ಕೊಡುತ್ತೆನೆ ಎಂದು ತಿಳಿಸಿದರು.
ನಾಳೆ ಕೇಂದ್ರ ನಾಯಕರ ಭೇಟಿಗೆ ಹೋಗುತ್ತಿದ್ದೇನೆ ಕೇಂದ್ರ ನಾಯಕರ ಜೋತೆ ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡುತ್ತೆನೆ.. ಕೇಂದ್ರ ನಾಯಕರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ ಅದರಂತೆ ನಾನು ನಡೆದುಕೊಂಡು ಹೋಗುತ್ತೆನೇ, ನಿನ್ನೆಯೇ ಜಗದೀಶ್ ಶೆಟ್ಟರ್ ಅವರ ಜೋತೆ ಮಾತನಾಡಿದ್ದೇನೆ.. ನನ್ನ ಜೋತೆ ಶೆಟ್ಟರ್ ವೈಯಕ್ತಿಕವಾಗಿ ಬಂದು ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.