Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಕೋಮುಹತ್ಯೆಗಳ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಕಾನೂನು ಕಠೀಣವಾಗಿದ್ರು ಕೂಡ ಈ ರೀತಿ ಘಟನೆಗಳು ನಡೆಯುತ್ತಿವೆ. ಆದ್ರೂ ಅವುಗಳನ್ನು ಹತ್ತಿಕ್ಕಲು ನಾವು ಕ್ರಮ ಕೈಗೊಳ್ಳುತ್ತೇವೆ. ನಾನು ಯಾರನ್ನು ಬ್ಲೇಮ್ ಮಾಡಲ್ಲ. ಕಾನೂನು ಮೀರಿ ಕೆಲಸ ಮಾಡಿದ್ರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಇನ್ನೂ ಕೆಲವರಿಗೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಬೆದರಿಕೆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ವಿಶೇಷ ಪಡೆ ರಚನೆ ಬಗ್ಗೆ ಇನ್ನೂ ಸಮಯ ನಿರ್ಧಾರ ಮಾಡಿಲ್ಲ. ಅದಕ್ಕೆ ಅಧಿಕಾರ ವ್ಯಾಪ್ತಿ, ಸಂಖ್ಯಾಬಲ ಇರಬೇಕಾಗುತ್ತದೆ. ಅದನ್ನು ನೋಡಿಕೊಂಡು ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.