ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ‘ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು ಮಾಡುತ್ತೀರಿ. ಆ ಪ್ರಕ್ರಿಯೆಯಲ್ಲಿ ನಾನು ನಿಮಗೆ ಸಹಾಯವನ್ನಷ್ಟೇ ಮಾಡಲು ಬಯಸುತ್ತೇನೆ’ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ. ‘ಬಂಗಾಳ ಬಹಳ ಬಲಿಷ್ಠ ರಾಜ್ಯವಾಗಿದೆ. ಭವಿಷ್ಯದಲ್ಲಿ ಗೋವಾ ಪ್ರಬಲ ರಾಜ್ಯವಾಗಲಿದೆ. ನಾವು ಗೋವಾದ ಹೊಸ ಉದಯವನ್ನು ನೋಡಲು ಬಯಸುತ್ತೇವೆ’ ಎಂದು ತಿಳಿಸಿದರು.

‘ಮಮತಾ ಜೀ ಬಂಗಾಳದವರು. ಗೋವಾದಲ್ಲಿ ಏನು ಮಾಡುತ್ತಾರೆ ಎಂದು ಯಾರೋ ಪ್ರಶ್ನಿಸುತ್ತಿದ್ದಾರೆ. ನಾನು ಭಾರತೀಯಳು. ನಾನು ಎಲ್ಲಿ ಬೇಕಾದರೂ ಹೋಗಬಹುದು. ನೀವೂ ಸಹ ಎಲ್ಲಿ ಬೇಕಾದರೂ ಹೋಗಬಹುದು, ನಾನು ಜಾತ್ಯತೀತತೆಯನ್ನು ನಂಬುತ್ತೇನೆ. ನನಗೆ ಏಕತೆಯಲ್ಲಿ ವಿಶ್ವಾಸವಿದೆ. ಬಂಗಾಳವು ನನ್ನ ಮಾತೃಭೂಮಿಯಾದರೆ, ಗೋವಾ ಸಹ ನನ್ನ ಮಾತೃಭೂಮಿಯಾಗಿದೆ’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

About The Author