Friday, June 20, 2025

Latest Posts

‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

- Advertisement -

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ.

ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ ಮಂಡಿಸಿದ್ರು. ಆಗ ಖರ್ಗೆ ಅವರು ಆಗ ವಿಪಕ್ಷದ ನಾಯಕರಾಗಿದ್ದರು. ಅವರು ತಮ್ಮ ಸೀಟ್‌ನಿಂದ ನೆಗೆದು ಬಂದು ಆ ನಿರ್ಣಯ ಪ್ರತಿಯನ್ನು ಹರಿದು ಅವರ ಮುಖಕ್ಕೆ ಎಸೆದರು. ಇವತ್ತು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ದೇವೇಗೌಡರು ವ್ಯಂಗ್ಯವಾಡಿದ್ದಾರೆ.

ಚುನಾವಣೆ ಮುಗಿಯುವ ವೇಳೆಯಲ್ಲಿ ನನಗೆ ಜ್ವರ ಬಂದು ಮಲಗಿದ್ದೆ. ಆಗ ಅವರು ನೀವು ಬಂದರೆ ನಾನು ಗೆಲ್ತಿನಿ ಇಲ್ಲಾ ಗೆಲ್ಲಲ್ಲ ಎಂದರು. ಅವರು ಜನರಲ್‌ ಕ್ಷೇತ್ರದಲ್ಲಿ ಸ್ಪರ್ದೆ ಮಾಡಿದ್ದರು. ಆಗ ಅವರು 700+ ಮತಗಳಿಂದ ಗೆದ್ದರು. ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ನಾನು ತುಮಕೂರಿನಿಂದ ಸ್ಪರ್ಧೆ ಮಾಡಿದಾಗ ನೀವು ಮುದ್ದು ಹನುಮೇಗೌಡರ ಸ್ಥಾನ ಕಿತ್ತುಕೊಂಡ್ರಿ ಅಂತಾ ಬಹಿರಂಗ ಸಭೆಯಲ್ಲಿ ಹೇಳಿದ್ರು ಎಂದು, 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಣ್ಣ ಮಾತನಾಡಿದ್ದ ಬಗ್ಗೆ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.  ನನಗೆ ನಾಲ್ಕು ಸೀಟ್ ಕೊಡ್ತಾರೊ‌, ಮೂರು ಕೊಡ್ತಾರೊ ಗೊತ್ತಿಲ್ಲ. ಯಾವ ಯಾವ ಸಮುದಾಯಕ್ಕೆ ಮೀಸಲಾತಿ ಲಾಭ ಆಗಿದೆ. ಇದರ ಲಾಭವನ್ನು ಯಾರು ಪಡೆದಿದ್ದಾರೆ ಚರ್ಚೆ ಆಗಬೇಕು ಎಂದು ಒತ್ತಾಯವಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಇರುವ ಹಿನ್ನೆಲೆ, ಕಾರ್ಯಕ್ರಮಕ್ಕೆ ನಾವೆಲ್ಲರೂ ಹೋಗಲಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.  ನಾನು ಅಯೋಧ್ಯೆಗೆ ಹೋಗ್ತೇನೆ. ನಾನು ನನ್ನ ಪತ್ನಿ, ಕುಮಾರಸ್ವಾಮಿ ಕುಮಾರಸ್ವಾಮಿ ಪತ್ನಿ ಹಾಗೂ ನಿಖಿಲ್‌ ಹೋಗ್ತೇವೆ. ಜನವರಿ 22 ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ ಅದರಲ್ಲೇ ಹೋಗ್ತೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ. ಎಸ್.ಎಂ.ಕೃಷ್ಣ, ಡಿ.ಕೆ.ಶಿವಕುಮಾರ್, ನಾನು ನಮ್ಮ ಸ್ವಾಮೀಜಿ ಎಲ್ಲರೂ ಭಾಗಿಯಾಗ್ತೆವೆ ಎಂದು ದೇವೇಗೌಡರು ಹೇಳಿದ್ದಾರೆ.

ಇನ್ನು ಇದೇ ವೇಳೆ ಲೋಕಕಲ್ಯಾಣಾರ್ಥವಾಗಿ ಅತಿರುದ್ರ ಮಹಾಯಾಗ ಆಯೋಜನೆ ಮಾಡಲಾಗಿದೆ.  ಶಿವಮೊಗ್ಗ ತಾಲೂಕಿನ, ಮತ್ತೂರಿನ ಶ್ರೀ ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದೆ.  ಜ.26, 27, 28, 29 ರಂದು ಮತ್ತೂರಿನ ಶಾರಾದ ವಿಲಾಸ ಶಾಲಾ ಆವರಣದಲ್ಲಿ ಅತಿರುದ್ರ ಮಹಾಯಾಗ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬರಬೇಕು ಎಂದು, ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಮಿತಿ ಮುಖಂಡರು ಆಹ್ವಾನ ನೀಡಿದ್ದಾರೆ. ಹಾಸನದ ಸಂಸದ ನಿವಾಸದಲ್ಲಿ ಎಚ್‌ಡಿಡಿಗೆ ಆಹ್ವಾನ ಪತ್ರಿಕೆ ನೀಡಿದ ಮಾಜಿ ಎಂಎಲ್‌ಸಿ ಭಾನುಪ್ರಕಾಶ್, ಭಾನುಪ್ರಕಾಶ್ ರಾಜ್ಯ ಆರ್.ಎಸ್‌ಎಸ್ ಮುಖಂಡ ಪಟ್ಟಾಭಿರಾಮ್.

ಅಯೋಧ್ಯೆ ರಾಮಮಂದಿರ ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ ತಾಂಜೇನಿಯಾದ ಕಿಲಿ ಪೌಲ್

ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕನೆಂದು ಮತ್ತೊಮ್ಮೆ ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು

- Advertisement -

Latest Posts

Don't Miss