Sunday, September 8, 2024

Latest Posts

ಹೈಕಮಾಂಡ್ ನಾಯಕರ ಸೂಚನೆಯಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ: ಶೆಟ್ಟರ್

- Advertisement -

Hubli News: ಹುಬ್ಬಳ್ಳಿ: ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷರ ಭೇಟಿಗೆ ಬೆಂಗಳೂರಿಗೆ ಹೋಗಿದ್ದೆ. ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಬೆಳಗಾವಿ ನಾಯಕರ ಜೊತೆ ಸಹ ಮಾತುಕತೆ ನಡೆಸಿದ್ದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ನಾಯಕರು ಸಹ ಬೆಳಗಾವಿ ನಾಯಕರು ಸಹ ಬನ್ನಿ‌ ಎಂದು ಸ್ವಾಗತಿಸಿದ್ದಾರೆ. ನಾನು ಬೆಳಗಾವಿ ಉಸ್ತುವಾರಿ ಸಚಿವರಾಗಿ, ವಿರೋಧ ಪಕ್ಷದ ನಾಯಕನಾಗಿ ಬೆಳಗಾವಿ ಜೊತೆ ಉತ್ತಮ ಒಡನಾಟ ಇದೆ. ಬೆಳಗಾವಿ ಕ್ಷೇತ್ರದಲ್ಲಿ ಸಾಕಷ್ಟು ಓಡಾಟ ನಡೆಸಿದ್ದೇನೆ. ಅಂಗಡಿ ಕುಟುಂಬದ ಜೊತೆ ಮಾತುಕತೆ ನಡೆಸಿಯೇ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

ಬೆಳಗಾವಿಯಲ್ಲಿ ಕಳೆದ ಬಾರಿ ಗೆಲುವಿನ ಹಂತರ ಕಡಿಮೆಯಾದ ವಿಚಾರಕ್ಕೆ ‌ಪ್ರತಿಕ್ರಯಿಸಿದ ಅವರು,
ಕಳೆದ ಬಾರಿ ಉಪ ಚುನಾವಣೆಯಲ್ಲಿ ಎಂಇಎಸ್ ಸ್ಪರ್ಧೆ ಕಾರಣಕ್ಕೆ ಗೆಲುವಿನ ಹಂತರ ಕಡಿಮೆ ಆಗಿತ್ತು.
ಆದ್ರೆ ಬೆಳಗಾವಿ ಮರಠಾ ಸಮುದಾಯದ ನಾಯಕರು ಮೋದಿ ನಾಯಕತ್ವ, ಹಿಂದುತ್ವದ ಪರವಾಗಿ ನಿಲ್ಲುತಾರೆ. ಈಶ್ವರಪ್ಪನವರ ಜೊತೆ ವರಿಷ್ಠರು ಮಾತನಾಡುತ್ತಿದ್ದಾರೆ.

ಅಸಮಾಧಾನ ಶಮನ ಮಾಡುವ ಕೆಲಸ ಪಕ್ಷದ‌ ನಾಯಕರು ಮಾಡ್ತಾರೆ. ಪಕ್ಷದಲ್ಲಿ ಅತಿಹೆಚ್ಚು ಆಕಾಂಕ್ಷಿಗಳಿದ್ದಾರೆ. ಆ ಕಾರಣಕ್ಕೆ ಟಿಕೆಟ್ ಮಿಸ್ ಆದಾಗ ಅಸಮಾಧಾನ ಇದ್ದೆ‌ ಇರುತ್ತೆ ಎಂದರು.

ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

- Advertisement -

Latest Posts

Don't Miss