ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.

ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿ.ಕೆ.ಶಿವಕುಮಾರ್ ಕೃಷ್ಣಭೈರೇಗೌಡ , ಪ್ರಿಯಾಂಕ ಖರ್ಗೆ ಅವರುಗಳ ಮೇಲು ಸಹ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ದೇವರಾಜೇಗೌಡ ಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನ ನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆ ನಡೆಸುತ್ತಿದ್ದು ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ಚಲುವರಾಯಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

About The Author