Saturday, July 27, 2024

Latest Posts

ಯಾವುದೇ ಪಕ್ಷ ತೊರೆದು ಬಿಜೆಪಿ ಸೇರಿದ್ದಲ್ಲಿ ವಾಶಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ: ಸಂತೋಷ್ ಲಾಡ್

- Advertisement -

Hubli News: ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಲೇವಡಿ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೆಕೆಪಿ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಿ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿಯನ್ನು ಈ ಹಿಂದೆ ಪ್ರಧಾನಿಗಳೇ ದೂರ ಇಟ್ಟಿದ್ದರು. ಇದೀಗ ಚುನಾವಣೆಯಲ್ಲಿ ಸೀಟುಗಳು ಕಡಿಮೆ ಬರುವ ಸರ್ವೇ ರಿಪೋರ್ಟ್ ಬರುತ್ತಿದ್ದಂತೆಯೇ ಬಿಜೆಪಿಯವರು ಸಣ್ಣಪುಟ್ಟ ಪ್ರಾದೇಶಿಕ ಪಕ್ಷಗಳನ್ನು ವಿಲೀನಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿದ್ದಾರೆ.‌ ಇದರಲ್ಲಿ ಯಾವುದೇ ವಿಶೇಷತೆಯಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ನಾನು ಲಂಚವನ್ನು ತಿನ್ನಿಸುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದ ಮೋದಿಯವರು ಇದೀಗ ಭ್ರಷ್ಟಾಚಾರ ಆರೋಪ ಹೊತ್ತಿರುವ ರೆಡ್ಡಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದಾರೆ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ಹಿಂದೆ ಶೇ.37 ರಷ್ಟು ಮತಗಳು ಬಂದಿದ್ದವು, ಇದೀಗ ಶೇ.29 ರಷ್ಟು ಬರಬಹುದು, ದೇಶದಾದ್ಯಂತ 200 ಸೀಟುಗಳು ಬಿಜೆಪಿಗೆ ಬರಲಿವೆ. ಇದು ಸರ್ವೇ ಮಾಹಿತಿಯಿಂದಲೇ ಬಹಿರಂಗಗೊಂಡಿದೆ ಎಂದರು.

ಲೋಕಸಭಾ ಚುನಾವಣೆ ಕಳೆದ 10 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಮೇಲೆ ನಡೆಯಬೇಕು. ಅದು ಬಿಟ್ಟು ಇದೀಗ ಆರೋಪ ಪ್ರತ್ಯಾರೋಪಗಳ ಮೇಲೆ ನಡೆಯುವಂತಾಗಿದೆ. ಇದು ದುರ್ದೈವ, ವಿಶ್ವ ಗುರು ಎಂದು ಹೇಳಿಕೊಳ್ಳುವ ನರೇಂದ್ರ ಮೋದಿ ಅವರ ಕಾಲದಲ್ಲಿಯೇ ದೊಡ್ಡ ದೊಡ್ಡ ಕಂಪನಿಗಳು ಮುಚ್ಚಿ ಹೋಗಿವೆ.‌ ಜಿವೋ ಕಂಪನಿಗೆ ಜಾಹಿರಾತು ಕೊಡುವ ಮೋದಿ ಅವರು ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಗೆ ಜಾಹಿರಾತು ನೀಡಲಿಲ್ಲ. ಉಚಿತವಾಗಿ ಸೇವೆ ನೀಡುವ ಜಿಯೋ ಲಾಭದ ಹಾದಿಯಲ್ಲಿದ್ದರೇ ಬಿಎಸ್ ಎನ್ ಎಲ್ ಯಾಕೆ ನಷ್ಟದಲ್ಲಿದೆ. ಇದರ ಬಗ್ಗೆ ಯಾಕೆ ಯಾರು ಮಾತನಾಡುವುದಿಲ್ಲ ಎಂದರು.

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

- Advertisement -

Latest Posts

Don't Miss