Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.
ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ ಎಂದ ಅವರು, ಮೇಲಿನಿಂದ ನಿರ್ದೇಶನ ಇರೋ ಕಾರಣಕ್ಕೆ ಹಾಗೇ ಮಾತನಾಡಿರಬೇಕು. ಕಾಂಗ್ರೆಸ್ ನವರು ಉದ್ರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದರೇ ನಡೆಯುತ್ತದೆಯೇ ಎಂದು ಅವರು ಪ್ರಶ್ನಿಸಿದರು.
ಕೋಲಾರದ ಅನ್ನ ಭಾಗ್ಗ ಬಗ್ಗೆ ಪ್ರಚಾರ ಮಾಡುತ್ತಾರೆ. ಕಾಂಗ್ರೆಸ್ ಒಂದು ಕಾಳು ಅಕ್ಕಿಯನ್ನು ಕೊಡಲಾಗಿಲ್ಲ. ಕೇಂದ್ರದ ಅಕ್ಕಿಯನ್ನು ನಾವೇ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಮುದ್ರಾಂಕ ಶುಲ್ಕ, ವಾಹನ ತೆರಿಗೆ ಸೇರಿ ಎಲ್ಲಾ ಶುಲ್ಕ ಏರಿಕೆಯಾಗಿದೆ. ಉಚಿತ ಗ್ಯಾರಂಟಿ ಕೊಟ್ಟ ಮೇಲೆ ಪ್ರಚಾರ ಏಕೆ ಮಾಡುತ್ತೀರಾ. ನಾವೇನು ಕೆಲಸ ಮಾಡಿದ್ದೇವೆ ಎಂದು ಹೇಳುವುದು ಸಹಜ ಪ್ರಕ್ರಿಯೆ ಎಂದರು. ನಾವು ಅಭಿವೃದ್ಧಿ ನೀಡಿದ್ದರ ಬಗ್ಗೆ ಹೇಳುತ್ತಿದ್ದೇವೆ. ಕಾಂಗ್ರೆಸ್ ನವರು ಕೊಡದೆ ಇರೋದ್ರ ಬಗ್ಗೆಯೇ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.
ನಾಲ್ಕು ಕೋಟಿ ಮನೆ ನಿರ್ಮಾಣ ಸುಳ್ಳು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ ಮನೆ ನಿರ್ಮಾಣವಾಗಿವೆ. ಲಾಡ್ ಅವರು ಹಳ್ಳಿಗೆ ಹೋಗಿಲ್ಲ. ಹಾಗಾಗಿ ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು..
Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?