ಬೆಂಗಳೂರು: ಇಂದು ಶಾಸಕ ಪ್ರಿಯಾಂಕ್ ಖರ್ಗೆಯವರು ಯುವತಿಯರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಹೇಳಿದ್ದರು. ಈಗ ಮುಂದುವರೆದು ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವ, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನಾನು ‘ಲಂಚ ಮಂಚದ ಸರ್ಕಾರ’ ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ! ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ? ಎಂದು ಹೇಳಿದ್ದಾರೆ.
ನಾನು 'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ!
ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ?
ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 12, 2022
- ಪ್ರತಿಯೊಂದು ಪರೀಕ್ಷೆಗಳಲ್ಲಿ ಹೀಗೆ ಅಕ್ರಮ ನಡೆದರೆ ಬಡವರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲಿಗೆ ಹೋಗಬೇಕು.?
- 40% ವ್ಯವಹಾರದಲ್ಲಿ ವಿಧಾನಸೌಧವನ್ನೇ ವ್ಯಾಪಾರ ಸೌಧ ಮಾಡಿಕೊಂಡಿದ್ದಾರೆ.
- ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ.
- ಸಿಎಂ ತಾವೊಬ್ಬ ಕಾಮನ್ ಮ್ಯಾನ್ ಎಂದು ಹೇಳುತ್ತಾರೆ, ಇವರ ಅಸಮರ್ಥ ಆಡಳಿತದಿಂದಾಗಿ ಕಾಮನ್ ಮ್ಯಾನ್ ಸಂಕಟಪಡುತ್ತಿದ್ದಾರೆ.
- ಇದೊಂದು ಅಸಮರ್ಥ ಸರ್ಕಾರವಿದ್ದು ಏನೇ ಅಕ್ರಮ ಮಾಡಿದರೂ ನಡೆಯುತ್ತಿದೆ ಎನ್ನುವುದು ಅಕ್ರಮ ಮಾಡುವವರಿಗೆ ಹಾಗೂ ಮಧ್ಯವರ್ತಿಗಳಿಗೆ ಗೊತ್ತಾಗಿದೆ ಎಂದು ಹೇಳಿದ್ದರು.




