ಮುಖ್ಯಮಂತ್ರಿ ಸಿದ್ದರಾಮಯ್ಯ ‘ಹಿಂದೂ’ ವಿವಾದ

ಭಾರತ ಬಹುತ್ವದ ರಾಷ್ಟ್ರ. ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ, ಭಾರೀ ಚರ್ಚೆಗಳನ್ನು ಹುಟ್ಟು ಹಾಕಿದೆ. ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘ ಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿ ಪ್ರವಾಸದ ಬಗ್ಗೆಯೂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತೇನೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮ ಇದೆ. ಅವತ್ತೇ ಹೋಗಿ ಅವತ್ತೇ ವಾಪಸ್ ಬರುವ ಯೋಜನೆ ಇದೆ. ರಾಹುಲ್ ಗಾಂಧಿ ಅವರ ಬಳಿ ಸಮಯ ಕೇಳಿದ್ದೇನೆ. ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಮರುದಿನ ಬರುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡುತ್ತೇನೆ. ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ರು.

ಇದೇ ವೇಳೆ, ಜಿ.ಟಿ. ದೇವೇಗೌಡರನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೈ ಬಿಟ್ಟಿರುವ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಅದು ಅವರ ಪಕ್ಷಕ್ಕೆ ಸೇರಿದ್ದು. ನಾನು ಯಾರನ್ನೂ ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ. ಬಂದರೆ ಯಾಕೆ ಬಂದ್ರಿ ಎಂದು ಕೇಳುವುದಿಲ್ಲ. ಅದು ಅವರವರಿಗೆ ಬಿಟ್ಟದ್ದು. ನಾನು ಜಿ.ಟಿ. ದೇವೇಗೌಡ ಒಂದೇ ಕ್ಷೇತ್ರದವರು. ಹೀಗಾಗಿ ಸ್ನೇಹ ಇದೇ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

About The Author