www.karnatakatv.net : ದೀಪಕ್ ಚಹಾರ್ ಹಾಗೂ ಸೂರ್ಯಕುಮಾರ್ ಭರ್ಜರಿ ಆಟದ ಪರಿಣಾಮ ಭಾರತ ಲಂಕಾ ವಿರುದ್ಧದ 2 ನೇ ಏಕದಿನ ಪಂದ್ಯವನ್ನು ಗೆದ್ದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಉತ್ತಮ ಆರಂಭ ಪಡೆದುಕೊಳ್ತು. ಬಳಿಕ ಮಿಡಲ್ ಓವರ್ಗಳಲ್ಲಿ ರನ್ರೇಟ್ ಕುಸಿತ ಕಂಡಿತಾದ್ರು, ಅಂತಿಮ ಓವರ್ಗಳಲ್ಲಿ ವೇಗವಾಗಿ ರನ್ ಕಲೆ ಹಾಕಿತು. ಈ ಮೂಲಕ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 275 ರನ್ ಗಳಿಸಿತು.
ಕಳೆದ ಪಂದ್ಯದಲ್ಲಿ ಸ್ಫೋಟಕ ಆಟ ಪ್ರದರ್ಶಿಸಿದ್ದ ಪೃಥ್ವಿ ಶಾ ಹಾಗೂ ಇಶಾನ್ ಕಿಶಾನ್ ಈ ಪಂದ್ಯದಲ್ಲಿ ಬೇಗನೇ ವಿಕೆಟ್ ಒಪ್ಪಿಸಿದ್ರು. ಧವನ್ ಹಾಗೂ ಮನೀಷ್ ಪಾಂಡೆ ಕೂಡ ಹೆಚ್ಚು ಸಮಯ ಕ್ರೀಸ್ನಲ್ಲಿ ನಿಲ್ಲಲಿಲ್ಲ. ಈ ವೇಳೆ ಅರ್ಧ ಶತಕ ಸಿಡಿಸಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಸರೆಯಾದ್ರು.
ಸೂರ್ಯ ಕುಮಾರ್ ಔಟ್ ಬಳಿಕ ತಂಡ ಸೋಲೋ ಸಾಧ್ಯತೆ ಸೃಷ್ಟಿಯಾಗಿತ್ತು. ಆದ್ರೆ ಸಮಯೋಚಿತ 69 ರನ್ಗಳಿಸಿದ ದೀಪಕ್ ಚಾಹರ್ ಟೀಮ್ ಇಂಡಿಯಾಕ್ಕೆ ರೋಚಕ ಜಯ ತಂದುಕೊಟ್ಟಿದ್ದಾರೆ. ಈ ಮೂಲಕ ಭಾರತ ಸರಣಿಯನ್ನೂ ಗೆದ್ದುಕೊಂಡಿದೆ.