Sunday, September 8, 2024

Latest Posts

ಗೌರಿ ಹಬ್ಬಕ್ಕೆ ಬಾಗೀನ ನೀಡುವುದ್ಯಾಕೆ ಗೊತ್ತಾ..? ಬಾಗೀಣದ ಬಗ್ಗೆ ಸಂಪೂರ್ಣ ವಿವರ..

- Advertisement -

ಗೌರಿ ಹಬ್ಬ ಹೆಣ್ಣು ಮಕ್ಕಳ ಹಬ್ಬ ಮತ್ತು ಗಣೇಶ ಹಬ್ಬ ಗಂಡು ಮಕ್ಕಳ ಹಬ್ಬ ಅಂತಾ ಕರೆಯಲಾಗತ್ತೆ. ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಪೂಜೆ ಮಾಡಿ, ಹಬ್ಬವನ್ನಾಚರಿಸುತ್ತಾರೆ. ಈ ದಿನ ಕೆಲವು ಕಡೆ ಮುತ್ತೈದೇಯರಿಗೆ ಬಾಗೀನ ನೀಡುವ ಪದ್ಧತಿ ಇದೆ. ಬಾಗೀನದಲ್ಲಿ 9 ರೀತಿಯ ಧಾನ್ಯಗಳು, ಬಳೆ, ಅಕ್ಕಿ, ಕಾಯಿ, ಹಣ್ಣು ಇತ್ಯಾದಿ ನೀಡಲಾಗುತ್ತದೆ. ಈ ಬಾಗೀನಕ್ಕೆ ಮಹತ್ವದ ಸ್ಥಾನವಿದೆ. ಹಾಗಾಗಿ ನಾವಿಂದು ಬಾಗೀನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.

ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು.

೧. ಅರಿಸಿನ: ಗೌರಿದೇವೀ.

೨. ಕುಂಕುಮ:ಮಹಾಲಕ್ಷ್ಮೀ

೩. ಸಿಂಧೂರ: ಸರಸ್ವತೀ

೪. ಕನ್ನಡಿ: ರೂಪಲಕ್ಷ್ಮೀ.

೫. ಬಾಚಣಿಗೆ:ಶೃಂಗಾರಲಕ್ಷ್ಮೀ.

೬. ಕಾಡಿಗೆ:ಲಜ್ಜಾಲಕ್ಷ್ಮೀ.

೭. ಅಕ್ಕಿ:ಶ್ರೀ ಲಕ್ಷ್ಮೀ.

೮. ತೊಗರಿಬೇಳೆ :ವರಲಕ್ಷ್ಮೀ

೯. ಉದ್ದಿನಬೇಳೆ:ಸಿದ್ದಲಕ್ಷ್ಮೀ

೧೦ ತೆಂಗಿನಕಾಯಿ:ಸಂತಾನಲಕ್ಷ್ಮೀ

೧೧. ವೀಳ್ಯದ ಎಲೆ:ಧನಲಕ್ಷ್ಮೀ

೧೨. ಅಡಿಕೆ಼:ಇಷ್ಟಲಕ್ಷ್ಮೀ

೧೩. ಫಲ (ಹಣ್ಣು): ಜ್ಞಾನಲಕ್ಷ್ಮೀ

೧೪. ಬೆಲ್ಲ:ರಸಲಕ್ಷ್ಮೀ

೧೫. ವಸ್ತ್ರ:ವಸ್ತ್ರಲಕ್ಷ್ಮೀ

೧೬. ಹೆಸರುಬೇಳೆ: ವಿದ್ಯಾಲಕ್ಷ್ಮೀ

ಮುತೈದೆ ದೇವತೆಯರು *೧೬ ಜನರು. ಇವರನ್ನು ಷೋಡಶಲಕ್ಷ್ಮೀಯರು ಎಂದು ಕರೆಯುತ್ತಾರೆ..

ಗೌರಿ, ಪದ್ಮ, ಶುಚಿ, ಮೇಧಾ, ಸಾವಿತ್ರಿ, ವಿಜಯಾ, ಜಯಾ, ದೇವಸೇನಾ, ಸಾಹಾ,  ಮಾತರಲೋಕಾ, ಮಾತಾರಾ, ಶಾಂತೀ, ಪೃಥ್ವಿ, ಧೃತೀ, ತುಷ್ಟೀ, ಸ್ವಧಾದೇವಿ.. ಸೀರೆ ಸೆರಗಿನಲ್ಲಿಮಹಾಲಕ್ಷ್ಮೀಯು ಸೌಭಾಗ್ಯ ರೂಪದಲ್ಲಿರುವುದರಿಂದ ಸೆರಗು ಹಿಡಿದು ಮರದ ಬಾಗಿಣ ಕೊಡುತ್ತಾರೆ..

ಮರದ ಬಾಗಿಣಕ್ಕೆ ಸಂಸ್ಕೃತದಲ್ಲಿ ವೇಣುಪಾತ್ರ ಎಂದು ಹೇಳುತ್ತಾರೆ.. ಮರದಬಾಗಿಣದಲ್ಲಿ ನಾರಾಯಣನ ಅಂಶ ಇರುತ್ತದೆ.. ಮರವೆಂಬ ನಾರಾಯಣ ಮತ್ತು ಒಳಗಿರುವ ಲಕ್ಷ್ಮಿಯರು ತರಹ ಜೊತೆಯಲ್ಲಿ, ದಂಪತಿಗಳು ಲಕ್ಷ್ಮೀ-ನಾರಾಯಣರ ತರಹ ಇರಲಿ ಅನ್ನೋ ಕಾರಣಕ್ಕೆ ಮತ್ತು ಸುಮಂಗಲಿ ತನ ಯಾವಾಗಲೂ ಇರಲಿ ಅನ್ನೋ ಕಾರಣಕ್ಕೆ ೧೬ ಸುಮಂಗಲೀ ದೇವತೆಗಳ ಸಾಕ್ಷಿಯಾಗಿ, ಬಾಗಿಣ ಕೊಡುತ್ತಾರೆ..

೧೬ ದೇವತೆಗಳು ನಿತ್ಯಸುಮಂಗಲಿಯರು. ಈ ೧೬ ದೇವತೆಗಳು ಸಂಸಾರದಲ್ಲಿ ಯಾವುದೇ ತರಹದ ಕಷ್ಟ,ನೋವು,ದುಃಖ ಬಂದರೂ ನಮ್ಮನ್ನು ರಕ್ಷಿಸಲಿ ಎಂದು ನೆನೆದು ಬಾಗಿಣ ಕೊಡಬೇಕು.. ಈ ೧೬ ದೇವತೆಗಳನ್ನು ಸ್ಮರಿಸುತ್ತಾ ಸ್ವರ್ಣಗೌರೀ ಹಬ್ಬದಲ್ಲಿ ಮಾಡುವ ಹೋರಾಪೂಜೆ, ಎಂದರೆ ದಾರಕ್ಕೆ ಮಾಡುವ ಪೂಜೆ..

೧೬ ಅರಿಸಿನ ದಾರ, ೧೬ ಗಂಟುಗಳು, ೧೬ ಬಾಗಿನ, ೧೬ ಎಳೆ ಗೆಜ್ಜೆವಸ್ತ್ರ, ಪೂಜಿಸಬೇಕೆಂದು ಗ್ರಂಥಗಳಲ್ಲಿ ಹೇಳಿದ್ದಾರೆ.. ದಾನಗಳು ಮತ್ತು ಫಲಗಳು, ನಾವು ಮಾಡುವ ಪೂಜೆ, ವ್ರತಗಳಲ್ಲಿ ಬಾಗಿನ ಕೊಡುವ ಪದ್ಧತಿ ಇದೆ. ದೇವಿಗೆ ಮಾಡುವ ಪೂಜೆಗಳಲ್ಲಿ ಇದು ಸಾಮಾನ್ಯ. ಬಾಗಿನವನ್ನು ಮರದ ಜೊತೆಯಲ್ಲಿ ಇಟ್ಟು ಕೊಡುತ್ತಾರೆ.

ಬಾಗಿನದ ಸಾಮಾನುಗಳ ಪಟ್ಟಿ ಇಲ್ಲಿದೆ: 1 ಜೊತೆ ಮೊರ – ಮೊರಕ್ಕೆ ಅರಿಶಿನ , ಕುಂಕುಮ ಹಚ್ಚಿ, ಧಾನ್ಯಗಳು – ಅಕ್ಕಿ, ಕಡಲೆಬೇಳೆ, ತೊಗರಿಬೇಳೆ, ಹೆಸರುಬೇಳೆ, ಉದ್ದಿನಬೇಳೆ, ರವೆ, ಬೆಲ್ಲದ ಅಚ್ಚು,ಉಪ್ಪು,ತೆಂಗಿನಕಾಯಿ,ಹಣ್ಣು, ಬಳೆ, ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ವೀಳ್ಯದ ಎಲೆ , ಅಡಿಕೆ, ದಕ್ಷಿಣೆ, ಅರಿಶಿನ , ಕುಂಕುಮ, ರವಿಕೆ ಬಟ್ಟೆ.

*೧. ಅರಿಸಿನ ದಾನ. ಅರಿಸಿನ ದಾನ ಮಾಡಿದಷ್ಟು ರೋಗ ನಿವಾರಣೆ ಆಗುತ್ತದೆ.. ಸುಮಂಗಲಿಯರಿಗೆ ಸೌಭಾಗ್ಯತನ ವೃದ್ಧಿಸುತ್ತದೆ.. ಸುಮಂಗಲಿಯರಿಗೆ ಸುಮಂಗಲಿತನ ಯಾವಾಗಲೂ ಇರಲಿ ಎಂಬ ಉದ್ದೇಶಕ್ಕೆ ಮೊದಲು ಅರಿಸಿನ ಕೊಡುತ್ತಾರೆ..

*೨. ಕುಂಕುಮ ದಾನ. ಕುಂಕುಮವನ್ನು ಯಾರು ಧರಿಸುತ್ತಾರೋ ಅವರು ಬಹಳ ತೇಜಸ್ಸು ಮತ್ತ ನಂಬಿಕೆ ಜಾಸ್ತಿ ಆಗುತ್ತೆ.. ಕುಂಕುಮ ಧಾರಣೆಯಿಂದ ದೈವಶಕ್ತಿ ಜಾಸ್ತಿಯಾಗುತ್ತದೆ.. ದೃಷ್ಟಿದೋಷ ನಿವಾರಣೆ ಆಗುತ್ತದೆ.. ಕೋಪ, ಹಠ,ಕಮ್ಮಿ ಆಗುತ್ತದೆ..

೩.ಸಿಂಧೂರ ದಾನ: ಸತಿ ಪತಿ ಕಲಹ ನಿವಾರಣೆ.., ರೋಗಭಾಧೆ,ಋಣಭಾದೆ, ನಿವಾರಣೆ.. ಮನೆಯಲ್ಲಿ ಸಂದೇಹ, ಒಳಜಗಳ, ಮಾಂತ್ರಿಕ ದೋಷಗಳು ನಿವಾರಣೆಯಾಗುತ್ತದೆ ..

*೪. ಕನ್ನಡೀ(ರೂಪಲಕ್ಷ್ಮೀ). ಕನ್ನಡಿಯನ್ನು ದಾನ ಮಾಡಿದರೆ ಸಮಸ್ತ ವಾಸ್ತು ದೋಷ, ದೃಷ್ಟಿದೋಷ ನಿವಾರಣೆಯಾಗುತ್ತದೆ..

*೫. ಬಾಚಣಿಗೆ : ಬಾಚಣಿಗೆ ದಾನ ಮಾಡಿದರೆ, ತಲೆಗೆ ಸಂಭಂದಿಸಿದ ಖಾಯಿಲೆಗಳು , ಯೋಚನೆಗಳು ಕಡಿಮೆಯಾಗುತ್ತವೆ, ಮತ್ತು ರೂಪವತಿಯಾಗುತ್ತಾರೆ..

*೬. ಕಾಡಿಗೆ. ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಾಗೋದು ಕಮ್ಮಿಯಾಗುತ್ತದೆ.. ಪೂರ್ಣ ಸ್ತ್ರೀ ತತ್ವ ಹೆಚ್ಚಾಗುತ್ತದೆ.‌.

*೭. ಅಕ್ಕಿ : ಯಾರು ಅಕ್ಕಿಯನ್ನು ದಾನ ಮಾಡುತ್ತಾರೋ ಅವರಿಗೆ ಮನಸ್ಸಿಗೆ ಸಂಭಂದಪಟ್ಟಂತಹ ಸರ್ವ ರೋಗಗಳು, ಯೋಚನೆಗಳು ನಿವಾರಣೆಯಾಗುತ್ತವೆ.‌ ಆರೋಗ್ಯಭಾಗ್ಯವಾಗುತ್ತದೆ.. ಮನೆಯಲ್ಲಿ ಕಲಹಗಳು ನಿವಾರಣೆಯಾಗುತ್ತದೆ..

*೮. ತೊಗರಿಬೇಳೆ : ತೊಗರೀಬೇಳೆ ದಾನದಿಂದ ಕುಜದೋಷ ನಿವಾರಣೆಯಾಗುತ್ತದೆ. ವಂಶಪಾರಂಪರ್ಯವಾಗಿ ಬಂದಿರುವ ಕುಜದೋಷಗಳು , ಸರ್ಪದೋಷಗಳು ನಿವಾರಣೆಯಾಗುತ್ತದೆ.. ರಜಸ್ವಲಾ ದೋಷಗಳು ನಿವಾರಣೆಯಾಗುತ್ತದೆ.. ರಕ್ತದೊತ್ತಡ (B.P) (normal) ನಾರಮಲ್ ಆಗಿ ಆರೋಗ್ಯವಂತರಾಗುತ್ತಾರೆ.. ಮನೆಯಲ್ಲಿ ಇರುವ ವಿವಾಹ ದೋಷಗಳು ನಿವಾರಣೆಯಾಗುತ್ತವೆ..

*೯. ಉದ್ದಿನ ಬೇಳೆ. ಪಿತೃಶಾಪ ನಿವಾರಣೆಯಾಗುತ್ತದೆ.. ನೀವು ಶ್ರಾಧ್ಧಗಳಲ್ಲಿ ಮಾಡಿರುವ ತಪ್ಪುಗಳ ಫಲ ಕಡಿಮೆಯಾಗುತ್ತದೆ.. ಅಪಮೃತ್ಯುಗಳು ನಿವಾರಣೆಯಾಗುತ್ತದೆ.. ಅಗೋಚರ ರೋಗಗಳು ನಿವಾರಣೆಯಾಗುತ್ತದೆ.. ಪತಿಯಲ್ಲಿರುವ ಸರ್ವ ದೋಷಗಳು ನಿವಾರಣೆಯಾಗುತ್ತವೆ..

*೧೦. ತೆಂಗಿನಕಾಯಿ : ಇಷ್ಟಾರ್ಥಸಿದ್ಧಿಯಾಗುತ್ತದೆ.. ತೆಂಗಿನಕಾಯಿ ಗೆ “ಇಷ್ಟಾರ್ಥ ಪ್ರದಾಯಿನಿ” ಅಂತನೂ ಹೆಸರಿದೆ.. ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ.. ಕಾರ್ಯಗಳು ಪೂರ್ಣಫಲ ಕೊಡಬೆರಕಾದರೆ ” ತೆಂಗಿನಕಾಯಿ ” ಮಾಡಲೇಬೇಕು.. ಸರ್ವಕಾರ್ಯ ವಿಜಯವಾಗುತ್ತದೆ.. ಆರೋಗ್ಯಭಾಗ್ಯ, ನೆಮ್ಮದಿ, ಸಂತೋಷ ದೊರೆಯುತ್ತದೆ.. ಸರ್ವ ಸಂತಾನ ಸಮಸ್ಯೆಗಳು ನಿವಾರಣೆಯಾಗುತ್ತದೆ.. ಉದರ ಸಂಭಂದಿ ರೋಗಗಳು ನಿವಾರಣೆಯಾಗುತ್ತದೆ..

*೧೧. ವೀಳ್ಯದೆಲೆ : ವೀಳ್ಯದೆಲೆಗೆ ದೇವತೆ “ಧನಲಕ್ಷ್ಮೀ”.! ತಾಂಬೂಲ ದಾನವನ್ನು ಮಾಡುವದರಿಂದ ಧನಲಕ್ಷ್ಮೀ ಅನುಗ್ರಹವಾಗಿ, ಧನಪ್ರಾಪ್ತಿಯಾಗುತ್ತದೆ.. ಮಹಾಲಕ್ಷ್ಮೀ ಪ್ರಸನ್ನಳಾಗುತ್ತಾರೆ.. ಹಣದ ಸಮಸ್ಯೆ ನಿವಾರಣೆಯಾಗುತ್ತದೆ.‌

*೧೨. ಅಡಿಕೆ : ಅಡಿಕೆಗೆ ಸಂಸ್ಕೃತದಲ್ಲಿ ” ಪೂಗೀಫಲ” ಎಂದು ಹೆಸರು.. ಅಡಿಕೆಗೆ ಅಭಿಮಾನ ದೇವತೆ “ಇಷ್ಟಲಕ್ಷ್ಮೀ”.! ಯಾರು ವೀಳ್ಯದೆಲೆ-ಅಡಿಕೆ ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥ ಹಾಗೂ ಬಯಕೆಗಳು ಬೇಗನೇ ನೆರವೇರುತ್ತದೆ.. ಬರೀ ಅಡಿಕೆಯನ್ನು ತಿಂದರೆ ” ಬ್ರಹ್ಮಹತ್ಯಾ” ದೋಷ ಬರುವುದು. ಆದ್ದರಿಂದ ಬರೀ ಅಡಿಕೆ ತಿನ್ನಬಾರದು..

*೧೩. ಫಲದಾನ . ಫಲದಾನಕ್ಕೆ ಜ್ಞನಲಕ್ಷ್ಮೀ ಅಧಿಪತಿ.. ಫಲದಾನ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಕಾರ್ಯಗಳೂ ಸುಗಮವಾಗಿ, ಸುಲಲಿತವಾಗಿ ಯಾವುದೇ ತೊಂದರೆಯಿಲ್ಲದೆ, ಯಶಸ್ವಿಯಾಗಿ, ಲಾಭವಾಗಿ ನಡೆಯುತ್ತದೆ಼.‌. ದೇವಿ ದೇವಾಲಯಗಳಲ್ಲಿ ಹಣ್ಣು ನೈವೇದ್ಯ ಮಾಡಿಸಿ ಸುಮಂಗಲಿಯರಿಗೆ ದಾನ ಮಾಡಿದರೆ , ಸ್ತ್ರೀ ಶಾಪಗಳು ನಿವಾರಣೆಯಾಗುತ್ತದೆ..

*೧೪. ಬೆಲ್ಲ (ರಸಲಕ್ಷ್ಮೀ) : ಬೆಲ್ಲದ ಅಭಿಮಾನ ದೇವತೆ “ರಸಲಕ್ಷ್ಮೀ”.. ಬೆಲ್ಲದಲ್ಲಿ ” ಬ್ರಹ್ಮದೇವರು” , ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾಗಣಪತಿ ದೇವರ ಸಾನಿಧ್ಯ ಇರುತ್ತದೆ.. ಬೆಲ್ಲದಾನ ಮಾಡಿದರೆ ಬಹಳಷ್ಟು ಯೋಚನೆಗಳು ನಿವಾರಣೆಯಾಗುತ್ತದೆ.. ನಿತ್ಯದಾರಿದ್ರ್ಯ ನಿವಾರಣೆಯಾಗುತ್ತದೆ.. ಜೀವನದಲ್ಲಿ ಉತ್ತಮ ಮಟ್ಟಕ್ಕೆ ಅಭಿವೃದ್ಧಿ ಆಗುತ್ತಾರೆ..

*೧೫. “ವಸ್ತ್ರಲಕ್ಷ್ಮೀ” : ಸುಮಂಗಲಿಯರು ಪ್ರತ್ಯಕ್ಷ “ಸ್ತ್ರೀದೇವತೆ” ಗಳ ಸ್ವರೂಪ ಹಾಗೂ ಕುಲದೇವತೆಯ ಸ್ವರೂಪ.. ಆದಿಶಕ್ತಿಯ ಸ್ವರೂಪ ಎಂದು ತಿಳಿದು ಬಾಗಿನ ಕೊಡುವಾಗ ವಸ್ತ್ರದಾನ ಮಾಡಬೇಕು.. ಹೀಗೆ ಮಾಡುವದರಿಂದ “ವಸ್ತ್ರ” ದಾರಿದ್ರ್ಯ ನಿವಾರಣೆಯಾಗುತ್ತದೆ.. ಕುಲದೇವತೆ ತೃಪ್ತಿಯಾಗುತ್ತದೆ.. ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ.. ಮನೆಯಲ್ಲಿನ ಸ್ತ್ರೀ ದೋಷಗಳು ನಿವಾರಣೆಯಾಗುತ್ತದೆ..

*೧೬. “ಹೆಸರುಬೇಳೆ”. ವಿದ್ಯಾಲಕ್ಷ್ಮೀ –  ವಿದ್ಯಾಲಕ್ಷ್ಮೀ ಹೆಸರು ಕೇಳುತ್ತಿದ್ದಂತೆ  ಎಲ್ಲರಿಗೂ ಸಂತೋಷವಾಗುತ್ತದೆ.. ವಿದ್ಯೆ ಎಂದರೆ “ಸರಸ್ವತೀ”, ಲಕ್ಷ್ಮೀ ಎಂದರೆ ” ಶ್ರೀ ಮಹಾಲಕ್ಷ್ಮೀ” ಎಂದು ಅರ್ಥ.. ಹೆಸರುಬೇಳೆಯನ್ನು ದಾನ ಮಾಡಿದವರಿಗೂ, ತೆಗೆದುಕೊಂಡವರಿಗೂ ಸರಸ್ವತೀ ದೇವಿ ಹಾಗೂ ಶ್ರೀ ಮಹಾಲಕ್ಷ್ಮೀ ದೇವಿಯ ಶಾಶ್ವತ ಅನುಗ್ರಹವಾಗುತ್ತದೆ.. ಹೆಸರುಬೇಳೆ ದಾನದಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಇರುತ್ತದೆ.. ಮನೆಯಲ್ಲಿ ಒಳಜಗಳಗಳು ನಿವಾರಣೆಯಾಗುತ್ತದೆ಼.. ದೇವಿಗೆ “ಹೆಸರುಬೇಳೆ” ತುಂಬಾ ಇಷ್ಟ, ಇದರಿಂದ ದೇವಿ ಸುಪ್ರಸನ್ನಳಾಗುತ್ತಾಳೆ.. ಮನೆಯಲ್ಲಿ ಎಲ್ಲರೂ ತುಂಬಾ ವಿದ್ಯಾವಂತರಾಗುತ್ತಾರೆ಼.‌ ಗ್ಯಾಸ್, ಗರ್ಭಕೋಶದ ತೊಂದರೆಗಳು ಕಡಿಮೆಯಾಗುತ್ತವೆ..

ಮೊರದ ಜೊತೆ ಬಾಗಿನದೇವಿಗೆ ಕೊಡುವ ಬಾಗಿನದಲ್ಲಿ ಮೇಲೆ ಹೇಳಿರುವ ಸಾಮಾನುಗಳ ಜೊತೆಗೆ ಪೂಜಾ ಸಾಮಗ್ರಿಗಳನ್ನು – ಗೆಜ್ಜೆವಸ್ತ್ರ, ಶ್ರೀಗಂಧ, ಊದಿನ ಕಡ್ಡಿ, ಇತ್ಯಾದಿ ಇಡುತ್ತಾರೆ. ಸ್ವರ್ಣ ಗೌರಿ ವ್ರತ, ಮಂಗಳ ಗೌರಿ ವ್ರತ, ಮಾರ್ಗಶಿರಮಹಾಲಕ್ಷ್ಮಿ ವ್ರತ, ಸಿರಿಯಾಳ ಷಷ್ಠಿ ಮುಂತಾದ ಪೂಜೆಗಳಲ್ಲಿ ಬಾಗಿನ ಕೊಡುತ್ತಾರೆ. ಮೊರದ ಜೊತೆ ಬಾಗಿನವನ್ನು ಸುಮಂಗಲಿಯರಿಗೆ ಕೊಟ್ಟು ಆಶೀರ್ವಾದ ಪಡೆದುಕೊಳ್ಳುವ ಪದ್ಧತಿ ಇದೆ.

ಸಾಮಾನ್ಯವಾಗಿ ಎಲ್ಲ ಸಾಮಾನುಗಳನ್ನೂ ದೊಡ್ಡ ಮೊರದ ಒಳಗೆ  ಪೂಜಾ ಸಮಾನು ಮಾರುವ ಆಂಗಡಿಗಳಲ್ಲಿ ಸಿಗುತ್ತದೆ. ನಾನೂ ಇಂತಹದನ್ನೆ ಉಪಯೂಗಿಸಿದ್ದೀನಿ. ಚಿಕ್ಕಮೊರದಲ್ಲಿ ಎಲ್ಲ ಸಾಮಾನು ಹಿಡಿಸುವುದಿಲ್ಲ . ಹೀಗಾಗಿ ಒಂದು ದೊಡ್ಡ ಮರ ಅಥವ ಡಬ್ಬಿ ಯಲ್ಲಿ ಎಲ್ಲ ಸಾಮಾನು ಇಟ್ಟು ಬಾಗಿನ ಕೊಡಬಹುದು.

- Advertisement -

Latest Posts

Don't Miss