Karkala ; ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣ: ಹುಬ್ಬಳ್ಳಿಯಲ್ಲಿ ಭೋಮಿ ಮಹಾಸಭಾದಿಂದ ಪ್ರತಿಭಟನೆ

ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

 

ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ಭೋವಿ ಮಹಾಸಭಾದಿಂದ ಬೃಹತ್ ಹೋರಾಟದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಾಚಾರ ಮಾಡಿದ ದುಷ್ಕರ್ಮಿಗಳನ್ನ ಎನ್‌ಕೌಂಟರ್ ಮಾಡಬೇಕು. ಅತ್ಯಾಚಾರಕ್ಕೆ ಒಳಪಟ್ಟ ಯುವತಿಯ ಕುಟುಂಬಕ್ಕೆ ಸರ್ಕಾರ ಭದ್ರತೆ ನೀಡಬೇಕೆಂದು ಪ್ರತಿಭಟನಾಕಾರರ ಒತ್ತಾಯಿಸಿದರು.

About The Author