Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.
ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ ನಡೆದಿವೆ. ಅಲ್ಲದೇ ಬಹುತೇಕ ಪ್ರಮುಖರು ಮನವಿ ಮಾಡಿ ಸಾಕಷ್ಟು ಕೂಡಲೇ ತನಿಖೆ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರವಾಗಿ ತನಿಖೆ ಪೂರ್ಣಗೊಳಿಸುತ್ತೇವೆ ಎಂದರು.
ಕೊಲೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈಗಲೇ ಎಲ್ಲವನ್ನೂ ಬಹಿರಂಗ ಪಡಿಸಲು ಆಗಲ್ಲ. ಅಲ್ಲದೇ ನಾವು ಪ್ರೀತಿ, ಪ್ರೇಮದ ವಿಚಾರದ ಬಗ್ಗೆ ತನಿಖೆ ನಡೆಸುತ್ತಿಲ್ಲ. ಕೊಲೆಯ ಬಗ್ಗೆ ಎಲ್ಲಾ ಆಯಾಮಾದಿಂದ ತನಿಖೆ ನಡೆಸಲಾಗುತ್ತದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಕೂಡ ಮಹಿಳೆಯರು ವಿಚಲಿತರಾಗದೇ ಧೈರ್ಯವಾಗಿರಬೇಕು. ಅಲ್ಲದೇ ಅವಳಿನಗರದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವ ಮೂಲಕ ಭದ್ರತೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ
ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್