ಗದಗ: ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಅದೊಂದು ಲೀಡರ್ ಲೆಸ್ ಪಾರ್ಟಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಬಿಜೆಪಿಯಲ್ಲಿ ಮಿಸ್ ಮ್ಯಾನೇಜ್ಮೆಂಟ್ ಇದೆ. ಬೈಂದೂರು ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿಸಿದ್ರು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಸುಕುಮಾರ್ ಶೆಟ್ಟಿ ಆಕ್ರೋಶದಲ್ಲಿದ್ದಾರೆ. ಮಾಜಿ ಶಾಸಕರು, ಕಾರ್ಯಕರ್ತರಲ್ಲಿ ಕ್ಷೋಭೆ ಉಂಟಾಗಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಅಂತಾ ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ ಅಂತವರ ಹೆಸರು ಹೇಳಲ್ಲ, ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ನಿರ್ಧಾರ ಆದ್ಮೇಲೆ ಹೆಸರು ಹೇಳುತ್ತೇನೆ ಎಂದರು. ಇನ್ನು, ಬಿಸಿ ಪಾಟೀಲ್ ಅವರು ಸಂಪರ್ಕದಲ್ಲಿಲ್ಲ. ಸೇಡು ತೀರಿಸಿಕೊಳ್ಳುವುದಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಪ್ರೊಟೆಸ್ಟ್ ಮಾಡಿದ್ದೆ. ಅವರಾಗೇ ಬರುತ್ತಿದ್ದಾರೆ. ಸೆಳೆಯುವ ಪ್ರಶ್ನೆ ಇಲ್ಲ. ಎಲ್ಲವನ್ನೂ ಕಾದು ನೋಡಿ ಎಂದರು.
ಇನ್ನು ಪ್ರಹ್ಲಾದ್ ಜೋಶಿ ವಿರುದ್ಧ ಜಗದೀಶ್ ಶೆಟ್ಟರ್ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಎಂಪಿಗೆ ಯಾರು ನಿಲ್ಲಬೇಕು ಅನ್ನೋದನ್ನ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ಮಾಡುತ್ತೆ. ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಸೌಲಭ್ಯಕ್ಕಾಗಿ, ಕೇಂದ್ರದ ಒಬಿಸಿಯಲ್ಲಿ ಲಿಂಗಾಯತರನ್ನ ಸೇರಿಸ್ಬೇಕು ಅಂತಾ ಆಗ್ರಹಿಸಿದ್ದಾರೆ. ಲಿಂಗಾಯತರಿಗೆ ಅನ್ಯಾಯವಾಗಿದೆ ಅನ್ನೋ ಕೂಗಿದೆ. ಇದಕ್ಕೆ ಹೋರಾಟದ ರೂಪ ಸಿಗ್ತಿದೆ. ನಾನು ನೇತೃತ್ವ ವಹಿಸೋದಲ್ಲ.. ಜಗದ್ಗುರುಗಳು ನೇತೃತ್ವ ವಹಿಸಿದ್ದಾರೆ ಎಂದರು.
ಬಿಎಲ್ ಸಂತೋಷ್ ಆ ರೀತಿ ಹೇಳಿಕೆ ಕೊಟ್ಟಿಲ್ಲ ಎಂದು ರಾಮುಲು ಹೇಳಿದ್ದಾರೆ ಎಂದ ಶೆಟ್ಟರ್, ಈಗ ಸಂತೋಷ್ ಅವರೇ ಸ್ಪಷ್ಟೀಕರಣ ಕೊಡಬೇಕು. ಮೊದಲು ನಾಲ್ಕು ಜನರನ್ನ ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಪ್ರಿಯಾಂಕ್ ಖರ್ಗೆಯವರು ಸವಾಲು ಹಾಕಿದ್ದಾರಲ್ವಾ ಎಂದು ಬಿಎಲ್ ಸಂತೋಷ್ಗೆ ತಿರುಗೇಟು ನೀಡಿದರು.
ಇನ್ನು ಚೀಟಿ ಎತ್ತುವ ಮೂಲಕವಾದ್ರೂ ತಾತ್ಕಾಲಿಕ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿ ಎಂದ ಜಗದೀಶ್ ಶೆಟ್ಟರ್, ಸರ್ಕಾರ ರಚಿಸಿ ನೂರು ದಿನವಾಯ್ತು. ಈಗ್ಲೂ ವಿರೋಧ ಪಕ್ಷದ ನಾಯಕ ಆಯ್ಕೆಯಾಗಿಲ್ಲ. ಶೋಚನೀಯ ಪರಿಸ್ಥಿತಿಯಲ್ಲಿದೆ ಅನ್ನೋದನ್ನ ಅರ್ಥಮಾಡಿಕೊಳ್ಳಬೇಕು. ರಾಜ್ಯ ಬಿಜೆಪಿ ಕೆಲವರ ಮುಷ್ಟಿಯಲ್ಲಿದೆ.. ಹೀಗಾಗಿ ಸುಧಾರಣೆಯಾಗಿಲ್ಲ ಎಂದರು.
Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್
Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!
Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!