ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ

Political News: ಇಂದಿನ ರಾಜ್ಯರಾಜಕಾರಣದಲ್ಲಿ ಉನ್ನತ ಬದಲಾವಣೆಯಾಗಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿದ್ದ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಮತ್ತೆ ಬಿಜೆಪಿಗೆ ಬಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್,  ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದು ಬರೆದುಕೊಂಡಿದ್ದಾರೆ..

ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

ಮೋದಿಯವರನ್ನು ಪ್ರಧಾನಮಂತ್ರಿ ಮಾಡಬೇಕು. ಈ ದೇಶ ಉಳಿಯಬೇಕೆಂದರೆ ಮೋದಿ ಬೇಕು: ಹೆಚ್.ಡಿ.ರೇವಣ್ಣ

About The Author