- Advertisement -
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ.
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದ್ದು, ಮುಂದಿನ ಪಂಚರತ್ನ ರಥಯಾತ್ರೆ ಬಗ್ಗೆ ಮಾಹಿತಿ ಕೊಟ್ಟರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡರು. ಗೆಲ್ಲುವ ವಿಶ್ವಾಸ ಇಲ್ಲದಿದ್ದರೆ ಕಷ್ಟ, ಇತರೆ ಮುಖಂಡರು, ಕಾರ್ಯಕರ್ತರನ್ನು ನಿರ್ಲಕ್ಷಿಸಬಾರದು ಎಂದು ಕುಮಾರಸ್ವಾಮಿಯವರು ತಾಕೀತು ಮಾಡಿದರು.
- Advertisement -