Kadooru News: ಕಡೂರು: ‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್’ ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ.
ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ ಮಂಜುನಾಥ್ ದೇವಸ್ಥಾನದ ಆವರಣದಲ್ಲಿರುವ ಬಿಲ್ವಪತ್ರೆ ಮರದಡಿಯಲ್ಲಿ ಹಾಕಲಾಗಿದ್ದ ಹಸಿರು ಚಪ್ಪರದಲ್ಲಿ ಉಪವಾಸ ವ್ರತ ಕೈಗೊಂಡಿದ್ದರು.
ಕಾರ್ಣಿಕದ ದಿನ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳ ನಂತರ ಹೊಳೆಪೂಜೆ ನಡೆದು ಬಿಲ್ಲನೇರಿದ ಗಣಮಗ ಸದ್ದಲೇ ಎಂದು ಕೂಗಿದಾಗ ಮೌನ ಆವರಿಸಿತು. ‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ನುಡಿದಾಗ ಜನರು ಹರ್ಷೋದ್ಘಾರ ಮಾಡಿದರು. ಮುಂದಿನ ವರ್ಷ ಮಳೆ ಬೆಳೆ ಸಮೃದ್ಧವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಮಲ ಮತ್ತೆ ಅರಳುತ್ತದೆ ಎಂದು ಸ್ಥಳೀಯರು ಕಾರ್ಣಿಕ ನುಡಿಯನ್ನು ಅರ್ಥೈಸಿದ್ದಾರೆ.
ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?
ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ