Saturday, July 27, 2024

Latest Posts

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

- Advertisement -

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ. ಹಾಗಿದ್ರೆ ದೆಹಲಿಯಲ್ಲಿ ಏನಾಯ್ತು. ಅಮಿತ್ ಶಾ ಗೆ ಈಶ್ವರಪ್ಪ ಮೇಲೆ ಯಾಕಿಷ್ಟು ಸಿಟ್ಟು..?

ಮಂಗಳವಾರ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ ಅವರು ದೂರವಾಣಿ ಮೂಲಕ ಈಶ್ವರಪ್ಪ ಅವರನ್ನು ಸಂಪರ್ಕಿಸಿ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಬುಧವಾರ ರಾತ್ರಿ ದೆಹಲಿಗೆ ತಲುಪಿದರು. ಆದರೆ, ಅಲ್ಲಿ ಹೋದ ಬಳಿಕ ಭೇಟಿ ಕಾರ್ಯಕ್ರಮ ಇಲ್ಲ. ಹೌದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ನಿಶ್ಚಿತವಾಗಿದೆ.

ಮಾತುಕತೆ ಸಲುವಾಗಿ ದೆಹಲಿಗೆ ಬರುವಂತೆ ಆಹ್ವಾನಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ತೆರಳಿದ್ದ ಈಶ್ವರಪ್ಪ ಅವರಿಗೆ ನಿರಾಸೆ ಉಂಟಾಗಿದ್ದು, ದೆಹಲಿಗೆ ತಲುಪಿದ ನಂತರ ಭೇಟಿ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಅಮಿತ್ ಶಾ ಅವರ ಕಚೇರಿಯಿಂದ ಬಂದಿದೆ. ನೀವು ವಾಪಸ್ ಹೋಗಬಹುದು ಎಂಬ ಅಮಿತ್ ಶಾ ಅವರ ಕಚೇರಿಯ ಸಂದೇಶ ಈಶ್ವರಪ್ಪ ಅವರನ್ನು ತಲುಪಿದೆ. ಹೀಗಾಗಿ, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಈಶ್ವರಪ್ಪ ಅವರು ಗುರುವಾರ ಬೆಳಗ್ಗೆ ವಾಪಸಾಗಿದ್ದಾರೆ.

ಅಮಿತ್ ಶಾ ಅವರ ಕರೆಯ ಬಳಿಕ ಈಶ್ವರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಮಾತ್ರ ನಾನು ಸ್ಪರ್ಧಿಸುವುದಿಲ್ಲ ಎಂಬುದಾಗಿ ದೆಹಲಿಯಲ್ಲಿ ಹೇಳಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದರು. ಬಹುಶಃ ಈ ಹೇಳಿಕೆ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿದೆ ಎನ್ನಲಾಗುತ್ತಿದೆ.

ದೆಹಲಿಯಲ್ಲಿ ಹೇಳಿಕೆ ನೀಡಿದ ಈಶ್ವರಪ್ಪ, ಅಮಿತ್‌ ಶಾ ಅವರ ಸೂಚನೆಯಂತೆ ನಾನು ದೆಹಲಿಗೆ ಬಂದೆ. ಇಲ್ಲಿಗೆ ಬಂದ ಬಳಿಕ ಅವರು ಸಿಗಲ್ಲ ಎಂಬ ಮಾಹಿತಿ ಗೃಹ ಸಚಿವರ ಕಚೇರಿಯಿಂದ ಬಂತು. ಹಾಗಿದ್ದರೆ ನಾನು ಬೆಂಗಳೂರಿಗೆ ಹೊರಡಲಾ ಎಂದು ಕೇಳಿದಾಗ, ಸರಿ ಹೊರಡಿ ಎಂಬ ಉತ್ತರ ಬಂತು.

ಇದರರ್ಥ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ನಿಲ್ಲಲಿ ಎಂಬುದು ಅಮಿತ್‌ ಶಾ ಅಪೇಕ್ಷೆಯೂ ಇದ್ದಂತಿದೆ. ನಾನು ಬಂಡಾಯ ಅಭ್ಯರ್ಥಿಯಾಗಿ ನಿಂತು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಆಶೀರ್ವಾದ, ಎಲ್ಲರ ಸಹಕಾರದಿಂದ ಗೆದ್ದೇ ಗೆಲ್ಲುತ್ತೇನೆ. ಗೆದ್ದ ನಂತರ ಮೋದಿ ಕೈ ಬಲಪಡಿಸುತ್ತೇನೆ ಎಂದು ತಿಳಿಸಿದರು.

ಹಿಂದೆ ನಾನು ರಾಯಣ್ಣ ಬ್ರಿಗೇಡ್ ಕಟ್ಟಿದಾಗ ಅಮಿತ್‌ ಶಾ ಅವರ ಮಾತು ಕೇಳಿ ಸಂಘಟನೆ ನಿಲ್ಲಿಸಿದೆ. ಕುಟುಂಬ ಸದಸ್ಯರ ಸ್ಪರ್ಧೆ ವಿಚಾರದಲ್ಲಿ ನಮ್ಮ ಕುಟುಂಬಕ್ಕೊಂದು ನೀತಿ, ಬೇರೆಯವರ ಕುಟುಂಬಕ್ಕೊಂದು ನೀತಿ ಯಾಕೆ? ಹೀಗಾಗಿ ನಾನು ಈ ಬಾರಿ ಚುನಾವಣೆಗೆ ನಿಂತೇ ನಿಲ್ಲುತ್ತೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದರು.

ಅಮಿತ್‌ ಶಾ ಅವರು ಕರೆ ಮಾಡಿದಾಗಲೂ ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂಬ ನನ್ನ ನಿಲುವು ಸ್ಪಷ್ಟಪಡಿಸಿದ್ದೆ. ಆಗ ಶಾ ಅವರು ದೆಹಲಿಗೆ ಬನ್ನಿ, ಇದು ನನ್ನ ಮನವಿ ಅಂದಿದ್ದರು. ಆಗ ನೀವು ಹಿರಿಯರಿದ್ದೀರಿ, ಮನವಿ ಅನ್ನಬೇಡಿ. ನಾನೇ ಬಂದು ಭೇಟಿ ಮಾಡುತ್ತೇನೆ ಅಂದಿದ್ದೆ. ಅದರಂತೆ ಬಂದೆ. ಅವರು ಸಿಕ್ಕಿದ್ದರೂ ನನ್ನ ನಿಲುವು ಬದಲಿಸುತ್ತಿರಲಿಲ್ಲ. ಇದೀಗ ಅಮಿತ್ ಶಾ ಅವರ ಭೇಟಿ ಸಾಧ್ಯವಾಗಿಲ್ಲ. ಹೀಗಾಗಿ ನಾನು ಯಾರನ್ನೂ ಭೇಟಿ ಆಗುವುದೂ ಇಲ್ಲ ಎಂದು ಖಡಕ್ಕಾಗಿ ಹೇಳಿದರು.

ಒಟ್ಟಾರೆ ಮಂಡ್ಯದಂತೆ ಶಿವಮೊಗ್ಗದಲ್ಲೂ ಕೊನೆ ಕ್ಷಣದಲ್ಲಿ ಊಹಿಸದ ಬದಲಾವಣೆ ಆಗುತ್ತಾ ಕಾದು ನೋಡ್ಬೇಕಿದೆ……

Congress : ಲೋಕಸಮರಕ್ಕೆ ಕಾಂಗ್ರೆಸ್ ನ 25 ಗ್ಯಾರಂಟಿಗಳು…!

ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ

ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

- Advertisement -

Latest Posts

Don't Miss