Friday, February 7, 2025

Latest Posts

Mandhya ; ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ; 3 ದಿನ ಅದ್ಧೂರಿ ನುಡಿಜಾತ್ರೆ

- Advertisement -

ಸಕ್ಕರೆ ನಗರಿ ಮಂಡ್ಯದಲ್ಲಿ ಡಿ 20.21 ಮತ್ತು 22 ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು….

ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡಧ್ವಜಾರೋಹಣ ಮಾಡಿದರು.

 

ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ನಾನಾ ಗಣ್ಯರು ಭಾರತ್ ಸೇವಾದಳದ ಮಕ್ಕಳು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಾಗೆ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಪಾಲ್ಗೋಂಡಿದ್ದರು. ಅದರಅಲ್ಲಿ ವಿಶೇಶವಾಗಿ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ ಇತ್ಯಾದಿಗಳ ಕಲಾತಂಡಬಾಗಿಯಾಗಿತ್ತು. ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

- Advertisement -

Latest Posts

Don't Miss