‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ಫಾರ್ಮ್ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಚಿತ್ರತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್ನ ಹೊಂಬಾಳೆ ಫಿಲಂಸ್ನ ಚಾನಲ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್ ಮಾಡಿಸಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಲೂ ಬೇರೆ ಟ್ಯೂನ್ ಬಳಸಲಾಗಿತ್ತು.
ಮೆಟಬಾಲಿಕ್ ಸರ್ಜರಿಯಿಂದ ಮಧುಮೇಹವನ್ನು ನಿಯಂತ್ರಿಸಬಹುದೇ..?ತಜ್ಞರು ಏನು ಹೇಳುತ್ತಾರೆ..?
ಈಗ ತಡೆಯಾಜ್ಞೆ ತೆರವಾಗಿ, ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಆದ್ದರಿಂದ ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಪುನಃ ಕೇಳಿಸಲಿದೆ. ‘ಕಾಂತಾರ’ ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆಯಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಿಷಭ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ, ಅಜನೀಶ್ ಲೋಕನಾಥ್ ಸಂಗೀತ ಮತ್ತು ಅರವಿಂದ್ ಅವರ ಛಾಯಾಗ್ರಹಣವಿದೆ. ‘ಕಾಂತಾರಾ’ ಚಿತ್ರವು 50 ದಿನಗಳನ್ನು ಪೂರೈಸಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಚಿತ್ರಕ್ಕೆ ಎಲ್ಲಡೆಯಿಂದ ಮೆಚ್ಚುಗೆಯ ಮಹಾಪೂರವೇ ಬರುತ್ತಿದೆ.




