ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಧ್ಯಾಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ.
ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ ಮಾಡಿದ್ದಾರೆ. ಒಬ್ಬರೇ ಎರಡೆರಡು ಹುದ್ದೆಯಲ್ಲಿದ್ದರೆ ತಮ್ಮ ಜವಬ್ದಾರಿ ನಿಭಾಯಿಸೋದು ಕಷ್ಟ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲೇ ಬೇಕು ಅನ್ನೋದು ಎಲ್ಲರ ಅಭಿಪ್ರಾಯ ಅಲ್ಲದೇ ಇದನ್ನ ಹೈಕಮಾಂಡ್ ನಿರ್ಧರಿಸುತ್ತದೆ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಅಲ್ಲದೇ ಇನ್ನು ಕೆಪಿಸಿಸಿಗೆ ಈಗಿರುವ ಅಧ್ಯಕ್ಷರನ್ನೇ ಮುಂದುವರಿಸಬೇಕಾ ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಅನ್ನೋದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು .ಇದು ನಮ್ಮ ಹಂತದಲ್ಲಿ ಆಗುವಂತಹದ್ದಲ್ಲ. ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಅಂದಿದ್ದಾರೆ.
ಇನ್ನು ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಪುತ್ರ ಮೃಣಾಲ್ ಕುರಿತು ಯಾವುದೇ ಚರ್ಚೆ ಆಗಿಲ್ಲ. ಎಲ್ಲರೂ ಸೇರಿ ಚರ್ಚೆ ಮಾಡಿ ಒಬ್ಬರ ಹೆಸರು ಅಂತಿಮ ಮಾಡಿ ವರಿಷ್ಠರಿಗೆ ಕೊಟ್ಟಿದ್ದೇವೆ. ಪಕ್ಷದ ಕೆಲಸಕ್ಕೆ ಯಾರು ಹೆಚ್ಚು ಸಮಯ ಕೊಡ್ತಾರೋ ಅಂತಹ ವ್ಯಕ್ತಿಯ ಹೆಸರನ್ನು ಕೊಡಲಾಗಿದೆ ಅಂತ ಸತೀಶ್ ಜಾರಕಿಹೊಳಿ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆ. ಇನ್ನು ಅಧ್ಯಕ್ಷರಾದವರು ಪಕ್ಷ ಸಂಘಟನೆಗೆ ಹೆಚ್ಚು ಸಮಯ ನೀಡಬೇಕು . ಕಾಂಗ್ರೆಸ್ ಕಚೇರಿಯಲ್ಲಿ ಹೆಚ್ಚು ಇರಬೇಕು . ಕಾರ್ಯಕರ್ತರ ಜತೆ ನಿರಂತರ ಸಂಪರ್ಕ ಹೊಂದಿರಬೇಕು. ಈ ಎಲ್ಲಾ ಮಾನದಂಡಗಳನ್ನ ಗಮನದಲ್ಲಿಟ್ಟುಕೊಂಡು ಸಾಮಾನ್ಯ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿಸಲು ಪ್ರಯತ್ನಸುತ್ತೇವೆ ಅಂದಿದ್ದಾರೆ.
ಇನ್ನು ನಿಗಮ ಮಂಡಳಿ ಗಳ ಅಧ್ಯಕ್ಷರ ನೇಮಕ ಮಾಡುವ ಅಧಿಕಾರ ಸಿಎಂ ಸಿದ್ದರಾಮಯ್ಯ ಅವ್ರಿಗಿದೆ. ಈಗಾಗಲೇ ಶೇ.70 ನೇಮಕವಾಗಿದ್ದು,ಇನ್ನು ಶೇ.30 ರಷ್ಟುಆಗಬೇಕಿದೆ, ನಮಗೆ ನಿರ್ದೇಶಕರು ಮತ್ತು ಸದಸ್ಯರನ್ನು ಮಾಡುವ ಜವಾಬ್ದಾರಿ ಮಾತ್ರವಿದೆ ಎಂದಿದ್ದಾರೆ.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ಇದ್ದು ಹಂತ ಹಂತವಾಗಿ ಎಲ್ಲ ನೇಮಕ ಮಾಡಲಾಗುವುದು. ಬೆಳಗಾವಿ ಜಿಲ್ಲೆಯ ವಿಭಜನೆ ವಿಷಯ ಬಜೆಟ್ ನಲ್ಲಿ ಇಲ್ಲ . ಹೊಸ ಜಿಲ್ಲೆಯಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇದೆ. ಜಿಲ್ಲೆ ವಿಭಜನೆಯಾದ್ರೆ ಒಳ್ಳೆದಾಗುತ್ತದೆ. ಆದ್ರೆ ಅದಕ್ಕೆ ಎಲ್ಲರ ಒಮ್ಮತ ಬರಬೇಕು ಅಷ್ಟೇ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.