- Advertisement -
ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ ಏರ್ಪಡಿಸಲಾಗಿದೆ. ನಗರದ ರಾಯಚೂರು ಸಂತೋಷ್ ಹಬ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಈ ಒಂದು ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸುಮಾರು ೨೨೦ ಅಧಿಕ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.
ಈಗಾಗಲೇ ಸಮಾವೇಶ ಆರಂಭವಾಗಿದ್ದು, ಈ ಭಾಗದ ಶಾಸಕರು, ಮಾಜಿ ಸಂಸದರು, ಜಿಲ್ಲಾ ಘಟಕಗಳ ಪ್ರಮುಖರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಕೈ ನಾಯಕರ ಆಗಮನ ಹಿನ್ನಲೆ ನಗರದ ಬಹುತೇಕ ರಸ್ತೆಗಳು ಜಾಮ್ ಆಗಿವೆ..
ಅನಿಲ್ ಕುಮಾರ್ ಕರ್ನಾಟಕ ಟಿವಿ ರಾಯಚೂರು
- Advertisement -