Sunday, September 8, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

 

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮಾಶ್ರೀ, ಸಿದ್ದರಾಮಯ್ಯ ಶಾಸಕರೂ ಆಗಿರೋ ಕ್ಷೇತ್ರಗಳನ್ನ ಒಳಗೊಂಡ ಜಿಲ್ಲೆ ಬಾಗಲಕೋಟೆ. ಬಾಗಲಕೋಟೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಪ್ಪ ಅಂದ್ರೆ, ಏಳು ಕ್ಷೇತ್ರಗಳಲ್ಲಿ ಬಿಜೆಪಿ 4 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ. ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ತೀವ್ರ ಪೈಪೋಟಿ ನೀಡಿದೆ.

ಬಾಗಲಕೋಟೆ ಜಿಲ್ಲೆ 7 ಕ್ಷೇತ್ರ

ಬಿಜೆಪಿ – 4
ಕಾಂಗ್ರೆಸ್​ – 3

ಬಾಗಲಕೋಟೆ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮುಧೋಳ : ಕಾಂಗ್ರೆಸ್ ಮುನ್ನಡೆ
ತೇರದಾಳ : ಬಿಜೆಪಿ ಮುನ್ನಡೆ
ಜಮಖಂಡಿ : ಕಾಂಗ್ರೆಸ್ ಮುನ್ನಡೆ
ಬೀಳಗಿ : ಬಿಜೆಪಿ ಮುನ್ನಡೆ
ಬಾದಾಮಿ : ಕಾಂಗ್ರೆಸ್
ಬಾಗಲಕೋಟೆ : ಬಿಜೆಪಿ
ಹುನಗುಂದ : ಬಿಜೆಪಿ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

‘ಕೈ’ ತೊರೆದು ‘ಕಮಲ’ ಹಿಡಿದ  ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ : ಸಂಚಲನ ಮೂಡಿಸಿದ ಶ್ರೀರಾಮುಲು ರಾಜಕೀಯ ನಡೆ..!

ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ್ ರೆಡ್ಡಿ ಚಾಲನೆ

- Advertisement -

Latest Posts

Don't Miss