Wednesday, June 18, 2025

Latest Posts

Amarnatha : ಕೇದರನಾಥದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಧಾರವಾಡದ ಐವರು

- Advertisement -

Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಸೇನಾ ಪಡೆಯುವರು ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ ಎಂಬಲ್ಲಿ ಖಾಸಗಿಯವರ ಟೆಂಟ್‌ನಲ್ಲಿ ಇರಿಸಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, ಹರೀಶ ಸಾಳುಂಕೆ, ಮಡಿವಾಳಪ್ಪ ಕೊಟಬಾಗಿ ಎಂಬುವವರೂ ಇದ್ದಾರೆ. ಇವರ ಜೊತೆಗೆ ಬೆಂಗಳೂರು, ರಾಯಚೂರು, ಗದಗ ಸೇರದಂತೆ ಕರ್ನಾಟಕದ ಅನೇಕ ಜಿಲ್ಲೆಯ ಜನ ಕೂಡ ಇದ್ದಾರೆ. ಟೆಂಟ್ ನಲ್ಲಿ ಇರಲು ಖಾಸಗಿಯವರಿಂದ ಹೆಚ್ಚಿನ ಹಣ ವಸೂಲಿ, ಅಲ್ಲದೆ ಊಟ ಮಾಡಿದರೆ ವಾಂತಿ, ಭೇದಿಯಾಗುತ್ತಿದೆ ಎಂದು ಆರೋಪ ಕೇಳಿ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಪ್ರವಾಸಿಗರನ್ನು ಕರೆತರುವ ಯತ್ನ ಮಾಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ 4ದಿನಗಳಿಂದ ಒಂದೇ ಕಡೆ ಇರುವ ಎಲ್ಲರು, ಅತಿಯಾದ ಚಳಿಗೆ ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Annabhagya Yojana : 3ನೇ ಗ್ಯಾರಂಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!

Siddaramaiha : ಕನ್ನಡಿಗರನ್ನು ರಕ್ಷಿಸಲು ನೆರವು- ಸಿಎಂ ನಿರ್ದೇಶನ

 

- Advertisement -

Latest Posts

Don't Miss