Banglore News:
ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ ಬರೆಯಬಹುದು.ಪತ್ರ ಬರೆಯಲಿ ಈ ಎಲ್ಲಾ ಹೇಳಿಕೆಯನ್ನು ಕೆಂಪಣ್ಣ ಮಾಡ್ತಿರೋದು ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರವೇ.ಅವರು ಲೋಕಾಯುಕ್ತರಿಗೂ ದೂರು ನೀಡಲಿ ಸತ್ಯ ಹೊರ ಬರಲಿ ಅವರ ಹೇಳಿಕೆಯಲ್ಲಿ ಯಾವುದೇ ಸತ್ಯ ಇಲ್ಲ. ಎಲ್ಲದಕ್ಕೂ ಲಂಚಕೋರರು ಎನ್ನುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.




