Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಟ್ವೀಟ್ ಮಾಡಿದ್ದರು.
ಅಲ್ಲದೇ, ನಿನ್ನೆ ಡಿಸಿಎಂ ಡಿಕೆಶಿ ಜೊತೆಯೂ, ನಟ ಕಿಚ್ಚ ಸುದೀಪ್ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯಭೂಮಿಯನ್ನು ಹಾಗೆ ಬಿಡಬೇಕು ಮತ್ತು ಹತ್ತು ಗುಂಟೆ ಜಮೀನು ನೀಡಲು ಸಹಕರಿಸಬೇಕು ಎಂದು ಸುದೀಪ್ ಡಿಕೆಶಿ ಬಳಿ ಮನವಿ ಮಾಡಿದ್ದಾರೆ.
ನಟ ಬಾಲಣ್ಣ ಮತ್ತು ವಿಷ್ಣು ಅಭಿಮಾನಿಗಳ ನಡುವೆ ಈ ಬಗ್ಗೆ ಗೊಂದಲವಿದೆ. ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯಭೂಮಿಯನ್ನು ನೆಲಸಮ ಮಾಡಬೇಕು ಎಂದು ಬಾಲಣ್ಣ ಕುಟುಂಬಸ್ಥರು ಒತ್ತಾಯಿಸುತ್ತಿದ್ದಾರೆಂದು, ವಿಷ್ಣು ಅಭಿಮಾನಿ ದೂರಿದ್ದಾರೆ. ಅಲ್ಲದೇ, ಈ ಜಾಗ ಪಿತ್ರಾರ್ಜಿತ ಆಸ್ತಿಯಲ್ಲ. ಸರಕಾರ ಕೊಟ್ಟಿದ್ದು, ಹಾಗಾಗಿ ನಾವೂ ಕೂಡ, ವಿಷ್ಣು ಪುಣ್ಯಭೂಮಿ ನೆಲಸಮವಾಗಲು ಬಿಡುವುದಿಲ್ಲವೆಂದು ಹೇಳಿದ್ದಾರೆ.
ಶೆಟ್ಟರ್ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?
ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು