Sunday, May 19, 2024

Latest Posts

ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

- Advertisement -

Hubli News: ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ( ಉಲ್ಲೇಖಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?
ನೇಹಾ ತಂದೆ ಹೇಳಿರುವಂತೆ, ಫಯಾಜ್ ನಮ್ಮ ಮಗಳ ಸಹಪಾಠಿ. ನನ್ನ ಮಗಳನ್ನು ಪ್ರೀತಿ ಮಾಡುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೇ ಮದುವೆ ಮಾಡಿಕೊಡುವಂತೆ ನಮ್ಮ ಕುಟುಂಬಸ್ಥರಿಗೂ ಪದೇ ಪದೇ ದೂರವಾಣಿ ಕರೆ ಮಾಡಿ ಕೇಳುತ್ತಿದ್ದ. ಆದ್ರೆ ನಮ್ಮ ಮನೆಯವರು ನಮ್ಮ ಮಗಳು ನಿನ್ನನ್ನು ಇಷ್ಟಪಡುತ್ತಿಲ್ಲ. ಅವಳು ಇನ್ನು ಹೆಚ್ಚಿನ ವ್ಯಾಸಂಗ ಮಾಡಬೇಕು ಅಂದುಕೊಂಡಿದ್ದಾಳೆ ಅಂತ ಹೇಳುತ್ತಲೇ ಇದ್ದರು. ಇದರಿಂದ ಹತಾಷೆಗೊಂಡ ಫಯಾಜ್ ಇದೇ ತಿಂಗಳ 18ರಂದು ಹತ್ಯೆ ಮಾಡಿದ್ದಾನೆ ಎಂದು ಹೇಳಿಕೆ ದಾಖಲಿಸಿದ್ದಾರೆ.

ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ

ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್

- Advertisement -

Latest Posts

Don't Miss