Thursday, September 19, 2024

Latest Posts

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

- Advertisement -

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು.

ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ ಕೋರ್ಟ್ ನಲ್ಲಿಯೇ ನ್ಯಾಯ ಸಿಕ್ಕಿದೆ. ಈ ನಿಟ್ಟಿನಲ್ಲಿ ಯಾವುದೇ ಆರೋಪಗಳಿಗೆ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಕುಮಾರಸ್ವಾಮಿ ಕೇಳಗಿಳಿಸುವ ಹುನ್ನಾರ ಎಂಬ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರನ್ನು ಹತ್ತಿಕುವ ಹಾಗೂ ಕೆಳಗಿಸುವ ಕಾರ್ಯವನ್ನು ಮಾಡಿಲ್ಲ. ಅಲ್ಲದೇ ನಮ್ಲ್ಲಿ ಸ್ಪಷ್ಟತೆ ಇದೆ. ಹಾಗೇ ಏನಾದರೂ ಇದ್ದರೇ ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿಯವರು ಯಾಕೆ ಬರಬೇಕಿತ್ತು..? ಎಂದು ಪ್ರಶ್ನಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿಯೇ ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೂ ಬಂದಿದ್ದೇವೆ. ಒಟ್ಟಾಗಿರುವ ನಾವು ಮುಂದೆಯೂ ಒಟ್ಟಾಗಿಯೇ ಮುನ್ನಡೆಯಬೇಕು ಎಂಬುವಂತ ಅಪೇಕ್ಷೆಯಿದೆ ಎಂದು ಅವರು ಹೇಳಿದರು.

- Advertisement -

Latest Posts

Don't Miss