- Advertisement -
ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ ಸಂದೇಶ ಬಂದಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇವರು ಸೆಪ್ಟೆಂಬರ್ 2021ರಲ್ಲಿ ಯುವಕರು ಮೊದಲನೇ ಲಸಿಕೆ ಹಾಕಿಸಿಕೊಂಡಿದ್ದರು. ಈ ಸಂಬಂಧ ಆರೋಗ್ಯ ಇಲಾಖೆಯ ಗಮನಕ್ಕೆ ತರಲಾಗಿದ್ದರೂ, ಆದರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಲೆಕೆಡಿಸಿಕೊಂಡಿಲ್ಲ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಂಜನೇಯ ಮತ್ತು ಚಮರಸ ಎಂಬ ಯುವಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
- Advertisement -